Tuesday, June 24, 2025
25.1 C
Bengaluru
Google search engine
LIVE
ಮನೆ#Exclusive Newsತುಮಕೂರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಯ ರಕ್ಷಣೆ!

ತುಮಕೂರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಯ ರಕ್ಷಣೆ!

ತುಮಕೂರು: ಮಂದಾರಗಿರಿ ಬೆಟ್ಟದ ಹಿಂಭಾಗದ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಕೊಚ್ಚಿ ಹೋಗಿದ್ದ ಹಂಸ (20)ಎಂಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ.

ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ಪೊಟರೆಯೊಂದರಲ್ಲಿ ಸಿಲುಕಿಕೊಂಡಿದ್ದಳು. ಸೋಮವಾರ ಆಕೆಯನ್ನು ಕಾಪಾಡುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ. ಸುಮಾರು 12 ಗಂಟೆಗಳ ಕಾರ್ಯಾಚರಣೆ ಬಳಿಕ ಯುವತಿ ಬದುಕಿ ಬಂದಿದ್ದಾರೆ. ಗುಬ್ಬಿ ತಾಲೂಕು ಶಿವರಾಂಪುರದ ನಿವಾಸಿ ಸೋಮನಾಥ್‌ ಅವರ ಪುತ್ರಿ ಹಂಸ ಅವರು ನಗರದ ಎಸ್‌ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದಾರೆ. ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಹೋಗಿ, ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತಡ ರಾತ್ರಿವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು. ಆದರೆ ಆಕೆ ಸಿಲುಕಿರುವ ಜಾಗಕ್ಕೆ ಹೋಗುವುದು ಸವಾಲಿನ ಕೆಲಸವಾಗಿತ್ತು. ಹತ್ತಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಕೋಡಿ ಹರಿಯುವ ಭಾಗದಲ್ಲಿ ಸುಮಾರು ಹದಿನೈದು ಅಡಿ ಆಳದಲ್ಲಿರುವ ಕಲ್ಲಿನ ಬಂಡೆ ನಡುವೆ ಹಂಸ ಸಿಲುಕಿರಬಹುದು ಎಂದು ಶಂಕಿಸಲಾಗಿತ್ತು. ಅದೀಗ ನಿಜವಾಗಿದೆ. ಕೋಡಿ ನೀರು ರಭಸದಿಂದ ಹರಿಯುತ್ತಿರುವ ಕಾರಣ, ಆಕೆಯ ಪತ್ತೆ ಹಾಗೂ ರಕ್ಷಣೆಗೆ ತೊಡಕಾಗಿತ್ತು. ಕೆರೆ ಕೊಡಿಯ ನೀರನ್ನು ಬೇರೆಡೆಗೆ ತಿರುಗಿಸುವ ಮೂಲಕ, ಆಕೆ ಸಿಲುಕಿದ್ದ ಕಲ್ಲಿನ ಪೊಟರೆಯ ಜಾಗಕ್ಕೆ ನೀರು ಹೋಗದಂತೆ ನೋಡಿಕೊಂಡು, ಬಳಿಕ ರಕ್ಷಣಾ ಕಾರ್ಯವನ್ನು ಯಶಸ್ವಿಯಾಗಿ ನಡೆಸಲಾಯಿತು. ಭಾನುವಾರ ರಕ್ಷಣಾ ಕಾರ್ಯ ಸ್ಥಗಿತಗೊಳಿಸಿದ್ದ ಅಗ್ನಿಶಾಮಕ ಸಿಬ್ಬಂದಿ, ಸೋಮವಾರ ಘಟನೆ ನಡೆದ ಮಂದಾರಗಿರಿ ಬೆಟ್ಟದ ಬಳಿ ಮೈದಾಳ ಕೆರೆ ಕೋಡಿ ಸ್ಥಳಕ್ಕೆ ಮತ್ತೆ ತೆರಳಿದ್ದು, ಬೆಳಿಗ್ಗೆಯಿಂದ ರಕ್ಷಣಾ ಕಾರ್ಯಾಚರಣೆ ಪುನಾರಂಭಿಸಿದ್ದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments