Tuesday, June 24, 2025
25.9 C
Bengaluru
Google search engine
LIVE
ಮನೆ#Exclusive Newsಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲು

ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲು

ಎಡಿಜಿಪಿ ಚಂದ್ರಶೇಖರ್​ ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ  ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಬಿಎನ್​ಎಸ್​ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ಆರೋಪಿ ನಂಬರ್​ 1 ಆಗಿದ್ದಾರೆ. ಜೆಡಿಎಸ್​ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ  ಆರೋಪಿ ನಂಬರ್​ 2 ಆಗಿದ್ದಾರೆ. ಮತ್ತು ಜೆಡಿಎಸ್​ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್​ 3 ಆಗಿದ್ದಾರೆ.

ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ. ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್​ಐಆರ್​ ದಾಖಲಾಗಿದೆ.

ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್​ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್​ಐಟಿ ಎಡಿಜಿಪಿ ಚಂದ್ರಶೇಖರ್​ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

 

  • ಕೇಂದ್ರ ಸಚಿವ HDK ವಿರುದ್ಧ FIR ದಾಖಲು
  • IPS ಅಧಿಕಾರಿ ಚಂದ್ರಶೇಖರಗೆ ಬೆದರಿಕೆ ಆರೋಪ
  • A1 ಕುಮಾರಸ್ವಾಮಿ, A2 ನಿಖಿಲ್​ ಕುಮಾರಸ್ವಾಮಿ,
  • A3 ಸುರೇಶ್​ ಬಾಬು ಎಂಬುವವರ ವಿರುದ್ಧ FIR
  • ಸಂಜಯನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು
  • ಕೋರ್ಟ್ ಆದೇಶದ ಮೇರೆಗೆ ಎಫ್​ಐಆರ್ ದಾಖಲು
  • ಬೇರೆ ರಾಜ್ಯಕ್ಕೆ ಕಳಿಸೋದಾಗಿ ಮೌಖಿಕ ಬೆದರಿಕೆ
  • ಲಂಚ ಪಡೆದಿರೋದಾಗಿ ಆರೋಪ ಮಾಡಿ ಬೆದರಿಕೆ
  • SIT ಯಲ್ಲಿ HDK ವಿರುದ್ಧ ಪ್ರಕರಣ ತನಿಖೆ ಹಿನ್ನಲೆ
  • ಸುದ್ದಿಗೋಷ್ಠಿ ನಡೆಸಿ ಬೆದರಿಕೆ ಹಾಕಿದ್ದಾರೆಂದು ದೂರು
  • ಈ ಹಿಂದೆ NCR ದಾಖಲಿಸಿದ್ದ ಎಡಿಜಿಪಿ ಚಂದ್ರಶೇಖರ್
  • ದುರುದ್ದೇಶ ಪೂರಕವಾಗಿ ಆರೋಪಿಸಿದ್ದಾರೆಂದು ದೂರು
  • 2023ರ BNS ಆ್ಯಕ್ಟ್​ ಸೆಕ್ಷನ್ 224ರ ಅಡಿ ಕೇಸ್ ದಾಖಲು
+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments