Tuesday, June 24, 2025
25.9 C
Bengaluru
Google search engine
LIVE
ಮನೆ#Exclusive Newsಡಿಸಿಎಂ ಹೆಸರಲ್ಲಿ ವಂಚನೆ ಮಾಡುತ್ತಿರುವ ವ್ಯಕ್ತಿ ಬಂಧನ !

ಡಿಸಿಎಂ ಹೆಸರಲ್ಲಿ ವಂಚನೆ ಮಾಡುತ್ತಿರುವ ವ್ಯಕ್ತಿ ಬಂಧನ !

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್  ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ  ಪಡೆದು ವಂಚಿಸುತ್ತಿದ್ದ.

ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್ ಒಬ್ಬರಿಗೆ ಕರೆ ಮಾಡಿದ್ದ. ಬಳಿಕ ವರ್ಗಾವಣೆ ಮಾಡಿಸಿಕೊಡುವುದಾಗಿ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಇವನ ಮಾತನ್ನು ನಂಬಿದ್ದ ಇಂಜಿನಿಯರ್ 80 ಸಾವಿರ ರೂ. ಹಣ ಕೊಟ್ಟಿದ್ದರು. ಬಳಿಕ ಈತನ ವಂಚನೆ ಬಗ್ಗೆ ತಿಳಿದು ಸಚಿವರ ಆಪ್ತ ಕಾರ್ಯದರ್ಶಿಗಳು ದೂರು ನೀಡಿದ್ದರು.ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments