Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsಬಿಟ್ ಆಫ್ ಲ್ಯಾಂಡ್ ಮಾರಾಟಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾರಂಭ

ಬಿಟ್ ಆಫ್ ಲ್ಯಾಂಡ್ ಮಾರಾಟಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾರಂಭ

ಮೈಸೂರು: ಮುಡಾ  ಹಗರಣ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸುದ್ದು ಮಾಡಿದೆ. ಸಿಎಂ ಮತ್ತು ಅವರ ಪತ್ನಿ ಸೇರಿದಂತೆ ಕುಟುಂಬದ ಮೇಲೆ ಆರೋಪ ಮಾಡಲಾಗಿದೆ.  ಈ ಮಧ್ಯೆ ಕೊನೆಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾರಂಭ ಮಾಡಿದ್ದು, ಬಿಟ್ ಆಫ್ ಲ್ಯಾಂಡ್ ಮಾರಾಟ ಹಾಗೂ ಮಂಜೂರಾತಿಗೆ‌ ಕಾರ್ಯದರ್ಶಿ ಪ್ರಸನ್ನಕುಮಾರ್​  ಆದೇಶ ಹೊರಡಿಸಿದ್ದಾರೆ.

ಪ್ರಾಧಿಕಾರದಿಂದ ರಚಿಸಲಾದ ಬಡಾವಣೆಗಳಲ್ಲಿ ತುಂಡು ಭೂಮಿ ಅಥವಾ ಉಳಿದಿರುವ ಭೂಮಿ ವಿಲೇವಾರಿ ಮಾಡುವ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ. ತಮ್ಮ ನಿವೇಶನ, ಮನೆಗಳಿಗೆ ಹೊಂದಿಕೊಂಡಂತೆ ತುಂಡು ಜಾಗ ಲಭ್ಯವಿದ್ದಲ್ಲಿ ಅಂತಹ ತುಂಡು ಜಾಗವನ್ನು ಮಂಜೂರು ಮಾಡುವ ಸಂಬಂಧ ಆದೇಶಿಸಲಾಗಿದೆ. ಈ ಪ್ರಕಟಣೆ ಹೊರಡಿಸಿದ 15 ದಿನದಲ್ಲಿ ಮೂಡಾಗೆ ಅರ್ಜಿ ಸಲ್ಲಿಸಬೇಕು. ನಂತರ ಸರ್ಕಾರದ ಮಾರ್ಗಸೂಚಿಯಂತೆ ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಲಾಗುವುದು.

ಇನ್ನು ಇತ್ತೀಚೆಗೆ ಮುಡಾದಲ್ಲಿ ತಮ್ಮ ಕೆಲಸ ಮಾಡಿಸಿಕೊಳ್ಳಲು ಆಗದೆ ಪರದಾಡುತ್ತಿದ್ದ ಜನರಿಗೆ ರಿಲೀಫ್ ಸಿಕ್ಕಿತ್ತು. ಹಗರಣದಿಂದಾಗಿ ಸಾರ್ವಜನಿಕರ ಕೆಲಸವನ್ನ ಸಂಪೂರ್ಣವಾಗಿ ನಿಲ್ಲಿಸಿದ್ದ ಮುಡಾದಿಂದ ಆ ಕೆಲಸವನ್ನು ಸ್ಥಳೀಯ ಸಂಸ್ಥೆಗಳಿಗೆ ವರ್ಗಾಯಿಸಲಾಗಿದೆ. ಇನ್ನು‌ ಮುಡಾದಲ್ಲಿ ಆಗುತ್ತಿದ್ದ ಖಾತೆ ಕಂದಾಯ ಎಲ್ಲವೂ ಸ್ಥಳೀಯ ಸಂಸ್ಥೆಗಳಲ್ಲಿ ಆಗಲಿದೆ.

ಖಾತೆ ಕಂದಾಯ ಸೇರಿದಂತೆ ಯಾವುದೇ ಕೆಲಸಗಳು ಆಗುತ್ತಿರಲಿಲ್ಲ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಇದಕ್ಕೆ ಬ್ರೇಕ್ ಹಾಕಿರುವ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಮುಡಾದ ಕೆಲಸವನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments