Tuesday, June 24, 2025
25.9 C
Bengaluru
Google search engine
LIVE
ಮನೆ#Exclusive Newsಬೆಳಗಾವಿ ಅಧಿವೇಶನ ಶತಮಾನೋತ್ಸವ ; ದಸರಾ ರೀತಿಯಲ್ಲಿ ಆಚರಣೆ :ಡಿ.ಕೆ.ಶಿವಕುಮಾರ್‌

ಬೆಳಗಾವಿ ಅಧಿವೇಶನ ಶತಮಾನೋತ್ಸವ ; ದಸರಾ ರೀತಿಯಲ್ಲಿ ಆಚರಣೆ :ಡಿ.ಕೆ.ಶಿವಕುಮಾರ್‌

 ಬೆಂಗಳೂರು ‘ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆಯೋಜಿಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು’ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ ನೀಡಿದ್ದಾರೆ.

ಕಾರ್ಯಕ್ರಮದ ಸಿದ್ಧತೆ ಕುರಿತು ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 1924ರಲ್ಲಿ ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದರು. ಈ ಹೆಮ್ಮೆಯ ಕ್ಷಣವನ್ನು ಆಚರಿಸುವ ಅವಕಾಶ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸಿಗರಿಗೆ ಮಾತ್ರ ಸಿಕ್ಕಿದೆ. ಹೀಗಾಗಿ ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾದ ಸ್ಥಳದಿಂದಲೇ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರಜಾಧನಿಯಾತ್ರೆ ಆರಂಭಿಸಿದೆ. ಗಾಂಧಿ ಬಾವಿಯಿಂದ ನೀರು ತೆಗೆದು ರಸ್ತೆ ತೊಳೆದು ಸ್ವಚ್ಛ ಮಾಡಿದೆ. ಗೃಹಜ್ಯೋತಿ ಗ್ಯಾರಂಟಿ ಯೋಜನೆಯನ್ನು ಅಲ್ಲಿಂದಲೇ ಘೋಷಣೆ ಮಾಡಿ ನಮ್ಮ ಹೋರಾಟ ಆರಂಭಿಸಿದೆ. ಆ ಮೂಲಕ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತರಲು ಯಶಸ್ವಿಯಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಶತಮಾನೋತ್ಸವ ಕ್ಷಣದಲ್ಲಿ ಇತಿಹಾಸವನ್ನು ಮೆಲುಕು ಹಾಕುವ ಅದೃಷ್ಟ ನಮ್ಮದಾಗಿದೆ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಂಭ್ರಮ ಆಚರಿಸುತ್ತಿದ್ದೇವೆ. ಗಾಂಧೀಜಿ ಅವರು ಅಂದು ಕುಳಿತ ಸ್ಥಾನದಲ್ಲಿ ಇಂದು ನಮ್ಮವರೇ ಆದ  ಖರ್ಗೆ ಅವರು ಕೂತಿದ್ದಾರೆ. ನಾವು ಯಾವ ರೀತಿ ಪಕ್ಷ ಕಟ್ಟಬೇಕು ಎಂದು ಹೊಸ ಅಧ್ಯಾಯ ಆರಂಭಿಸಿ 2028ರ ಚುನಾವಣೆಯಲ್ಲಿ ಪುನಃ ಪಕ್ಷ ಜಯಗಳಿಸುವಂತೆ ಮುನ್ನುಡಿ ಬರೆಯಬೇಕಿದೆ ಎಂದು ಅಭಿಪ್ರಾಯಪಟ್ಟರು.

60 ಸದಸ್ಯರ ಸಮಿತಿ ರಚನೆ: ಇದು ಪಕ್ಷದ ಜೊತೆಗೆ ಸರ್ಕಾರದ ಕಾರ್ಯಕ್ರಮವೂ ಆಗಿದೆ. ಎಚ್. ಕೆ.ಪಾಟೀಲ್, ವೀರಪ್ಪ ಮೊಯ್ಲಿ, ಬಿ.ಎಲ್.ಶಂಕರ್ ನೇತೃತ್ವದಲ್ಲಿ ಸರ್ಕಾರದ ಸಚಿವರು ಹಾಗೂ ಪಕ್ಷದ ಮುಖಂಡರನ್ನೊಳಗೊಂಡ 60 ಸದಸ್ಯರ ಸಮಿತಿ ರಚಿಸಲಾಗಿದ್ದು, ರೂಪುರೇಷೆ ಸಿದ್ಧವಾಗಲಿದೆ. ಬೆಳಗಾವಿಯಲ್ಲಿ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸ್ಥಳದಲ್ಲಿ ಡಿ.26 ರಂದು ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಸಿಎಲ್‌ಪಿ ನಾಯಕರು, 150 ಸಂಸದರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಂದು ಮಹಾತ್ಮಾ ಗಾಂಧಿ ಅವರ ಪ್ರತಿಮೆ ಉದ್ಘಾಟನೆ ಸಹ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿಥಿಗಳಿಗೆ ಭೋಜನ ಕೂಟ ಆಯೋಜಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments