#Exclusive NewsTop Newsರಾಜಕೀಯಸುದ್ದಿ

ದೆಹಲಿ ; `ಪ್ಯಾರಿ ದೀದಿ ಯೋಜನೆ’ ಪ್ರಕಟಿಸಿದ ಡಿ.ಕೆ.ಶಿವಕುಮಾರ್​ 

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ `ಗೃಹಲಕ್ಷ್ಮಿ’ ಮಾದರಿಯಲ್ಲಿ `ಪ್ಯಾರಿ ದೀದಿ ಯೋಜನೆ’  ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್  ಅವರು ಸೋಮವಾರ ಪ್ರಕಟಿಸಿದರು.

ಆಮ್ ಆದ್ಮಿ ಪಕ್ಷದ ನಂತರ ಈಗ ಕಾಂಗ್ರೆಸ್ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂಪಾಯಿ ನೀಡುವುದಾಗಿ ಭರವಸೆ ನೀಡಿದೆ. ಎಎಪಿಯ ‘ಮಹಿಳಾ ಸಮ್ಮಾನ್’ ಯೋಜನೆಯ ಮುಂದೆ, ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆಯನ್ನು ಘೋಷಿಸಿದೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಮೊದಲು ಮಹಿಳಾ ಸಮ್ಮಾನ್ ಯೋಜನೆಯಡಿ ಮಹಿಳೆಯರಿಗೆ 2100 ರೂಪಾಯಿ ನೀಡುವುದಾಗಿ ಘೋಷಿಸಿತ್ತು. ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಘೋಷಣೆಯ ನಂತರ, ಕಾಂಗ್ರೆಸ್ ಕೂಡ ಮಹಿಳಾ ಮತದಾರರನ್ನು ಸೆಳೆಯಲು ತಂತ್ರವನ್ನು ಹೂಡಿದೆ. ‘ಪ್ಯಾರಿ ದೀದಿ ಯೋಜನೆ’ ಅಡಿಯಲ್ಲಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂಪಾಯಿ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

http://<blockquote class=”twitter-tweet” data-media-max-width=”560″><p lang=”kn” dir=”ltr”>ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ ನಾಯಕರೊಂದಿಗೆ ಇಂದು ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡೆ. ಈ ವೇಳೆ ಮಹಿಳೆಯರಿಗೆ ಮಾಸಿಕ 2.500 ರೂಪಾಯಿ ನೀಡಲಿರುವ ಮಹತ್ವಾಕಾಂಕ್ಷೆಯ &quot;ಪ್ಯಾರಿ ದೀದಿ&quot; ಯೋಜನೆಯನ್ನು ಘೋಷಿಸಲಾಯಿತು. ದಿಲ್ಲಿಯಲ್ಲಿ… <a href=”https://t.co/KoOyfc65k4″>pic.twitter.com/KoOyfc65k4</a></p>&mdash; DK Shivakumar (@DKShivakumar) <a href=”https://twitter.com/DKShivakumar/status/1876186554420568149?ref_src=twsrc%5Etfw”>January 6, 2025</a></blockquote> <script async src=”https://platform.twitter.com/widgets.js” charset=”utf-8″></script>

 

 

Comments (0)

Your email address will not be published. Required fields are marked *

Back to top button