Thursday, January 29, 2026
26.8 C
Bengaluru
Google search engine
LIVE
ಮನೆ#Exclusive Newsಸ್ಯಾಟಲೈಟ್ ಟೌನ್ ರಿಂಗ್ ರೋಡ್ ; ಗಡ್ಕರಿ ಭೇಟಿಯಾದ ಕುಮಾರಸ್ವಾಮಿ

ಸ್ಯಾಟಲೈಟ್ ಟೌನ್ ರಿಂಗ್ ರೋಡ್ ; ಗಡ್ಕರಿ ಭೇಟಿಯಾದ ಕುಮಾರಸ್ವಾಮಿ

ಬೆಂಗಳೂರು : ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಮಂಡ್ಯ ವರ್ತುಲ ರಸ್ತೆ ಯೋಜನೆ ಸೇರಿದಂತೆ ರಾಜ್ಯದ ನಿರ್ಣಾಯಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ಕೇಂದ್ರ ಕೈಗಾರಿಕಾ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದರು.

ಎಲ್ಲೆಲ್ಲಿ ಹಾದುಹೋಗಲಿದೆ ಸ್ಯಾಟಲೈಟ್ ಟೌನ್ ರಿಂಗ್ ರೋಡ್?

ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಲಿನ ಎಂಟು ಕೈಗಾರಿಕಾ ಪಟ್ಟಣಗಳನ್ನು ಸಂಪರ್ಕಿಸುವಂತೆ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ.

ಚರ್ಚಿಸಿದ ಇತರ ಯೋಜನೆಗಳು:

– ಪಾಂಡವಪುರ ಮತ್ತು ಕಿರಂಗೂರು ಬಳಿ (ಜೇವರ್ಗಿ-ಚಾಮರಾಜನಗರ ಹೆದ್ದಾರಿ) NH-150A ಅಭಿವೃದ್ಧಿ.

– ಆಂಧ್ರಪ್ರದೇಶ ಮತ್ತು ಕರ್ನಾಟಕದ ಕುಪ್ಪಂ-ಬಂಗಾರಪೇಟೆ-ಕೋಲಾರ-ಚಿಂತಾಮಣಿ ಸಂಪರ್ಕಿಸುವ NH-42.

– ಗಜಾನನ ವೃತ್ತ (ಚಿಂತಾಮಣಿ) ಮತ್ತು ಚೇಳೂರು ನಡುವೆ NH-69.

– ಹೊಸಕೋಟೆ-ಎಚ್ ಕ್ರಾಸ್-ಚಿಂತಾಮಣಿ ಮೂಲಕ NH-75 ಮತ್ತು NH-69 ನಡುವಿನ ಸಂಪರ್ಕ.

– ಹೊಸಕೋಟೆ-ಗೌನಿಪಲ್ಲಿ-ಶ್ರೀನಿವಾಸಪುರ ಮೂಲಕ NH-42 ಮತ್ತು NH-75 ಅನ್ನು ಸಂಪರ್ಕಿಸುವುದು.

 

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments