ಕಲಬುರಗಿ : ಭಾರತ ಚುನಾವಣಾ ಆಯೋಗವು 2024-25ನೇ ಸಾಲಿನ ಅತ್ಯತ್ತಮ ಚುನಾವಣಾ ಪದ್ದತಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತಂದಿದ್ದಕ್ಕಾಗಿ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಿದ್ದು,ಜನರಲ್ ಕೆಟಗರಿ ವಿಭಾಗದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ಪ್ರಶಸ್ತಿ ಘೋಷಿಸಿದೆ.
ಈ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಭಾರತ ಚುನಾವಣಾ ಆಯೋಗವು ಇದೇ ಜನವರಿ 25 ರಂದು ನವದೆಹಲಿಯ ದೆಹಲಿ ಕಂಟೋನ್ಮೆಂಟ್ ಪ್ರದೇಶದ ಮಾಣಿಕಶಾ ಸೆಂಟರ್ ನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.ಇನ್ನು ಜನರಲ್ ಕೆಟಗರಿಯಲ್ಲಿ ಐ.ಎ.ಎಸ್ ಅಧಿಕಾರಿಯಾಗಿರುವ 9 ಜನ ಜಿಲ್ಲಾ ಚುನಾವಣಾಧಿಕಾರಿಗೆ ಮತ್ತು ಇಬ್ಬರು ಐ.ಪಿ.ಎಸ್. ಅಧಿಕಾರಿಗಳಿಗೆ ಪ್ರಶಸ್ತಿ ಲಭಿಸಿದ್ದು, ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಪ್ರಶಸ್ತಿಗೆ ಭಾನರಾದ ಕರ್ನಾಟಕದ ಏಕೈಕ ಅಧಿಕಾರಿಯಾಗಿದ್ದಾರೆ.