ಕ್ರೈಂ ಸ್ಟೋರಿರಾಜಕೀಯರಾಜ್ಯ

ಕಾಂಗ್ರೆಸ್ ಮುಖಂಡನಿಗೆ ಬೆದರಿಕೆ ಕರೆ; ಎಫ್ ಐ ಆರ್ ದಾಖಲು

ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ. ಕೆ. ಅಲ್ತಾಫ್ ಅವರಿಗೆ ಅಪರಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅಲ್ತಾಫ್ ಅವರು ಜೆ.ಜೆ.ನಗರ ಪೋಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ.

ಪಿಎಫ್​ಐ ಸಂಘಟನೆಯವರೊಂದಿಗೆ ಆಟವಾಡಬೇಡ, ಆರ್​ಎಸ್​ಎಸ್​ ಏಜೆಂಟ್​ ಆಗಿ ಕೆಲಸ ಮಾಡಬೇಡ. ನಾಳೆ ನಿನ್ನ ಮಗಳ ಮದುವೆ ಇದೆ. ನಮ್ಮಿಂದ ನೀನು ಹಲವು ಬಾರಿ ಬಚಾವ್​ ಆಗಿದ್ದೀಯಾ. ಇನ್ಮುಂದೆ ನೀನು ಬಚಾವ್​ ಆಗಲು ಆಗಲ್ಲ. ನಿನ್ನ ತಮ್ಮಂದಿರನ್ನು ನೀನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ನಿನ್ನ ಮತ್ತು ನಿನ್ನ ಕುಟುಂಬದವರನ್ನು ಜೀವ ಸಹಿತ ಬಿಡುವುದಿಲ್ಲ. ನೀನು ನ್ಯಾಯಾಲಯದಲ್ಲಿ ಕೇಸ್​ಗೆ ಸಾಕ್ಷಿ ಹೇಳಲು ಹೋಗಬಾರದು. ಹೋದರೇ ನೀನು ಉಳಿಯುವುದಿಲ್ಲ. ಆರ್​ಎಸ್​ಎಸ್​ಗೆ ಚಮಚಗಿರಿ ಮಾಡಿದರೆ ಪಿಎಫ್​​ಐ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಅಪರಿಚಿತ ವ್ಯಕ್ತಿ ಫೆಬ್ರವರಿ 5ರಂದು ರಾತ್ರಿ 8 ಗಂಟೆ ಸುಮಾರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದೆ

ಸದ್ಯ ಪ್ರಕರಣ ಜೆ.ಜೆ.ನಗರ ಠಾಣೆಯಿಂದ ಸಿಸಿಬಿಗೆ ವರ್ಗಾವಣೆಯಾಗಿದ್ದು ತನಿಖೆ ನಡೆಸಲಾಗುತ್ತಿದೆ

Comments (0)

Your email address will not be published. Required fields are marked *

Back to top button