ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಈ ಕುರಿತು ಸಂಸದ ಬ್ರಿಜೇಶ್ ಚೌಟ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಟೋಗಳನ್ನು ಹಂಚಿಕೊಂಡು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ಮತ್ತು ಸಂಸದೆ ಕಂಗನಾ ರನೌತ್ ಅವರೊಂದಿಗೆ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ ಎಂದಿದ್ದಾರೆ