ರಾಜಕೀಯ

ವಿಧಾನಸಭೆಯಲ್ಲಿ ಭಾರಿ ಹೈಡ್ರಾಮ; ಸ್ಪೀಕರ್ ಮೇಲೆ ಕಾಗದ ಎಸೆತ

ಬೆಂಗಳೂರು: ವಿಧಾನಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಅಧಿವೇಶನದಲ್ಲಿ ಹನಿಟ್ರ್ಯಾಪ್ ಪ್ರಕರಣದ ಕುರಿತಂತೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಹನಿಟ್ರ್ಯಾಪ್ ಪ್ರಕರಣ ತನಿಖೆ ಆಗಬೇಕೆಂದು ಶಾಸಕರು ಆಗ್ರಹಿಸಿದರು.

ಇನ್ನು ರಾಜ್ಯ ಸರ್ಕಾರ ಮಂಡನೆ ಮಾಡಿರುವ ಬಜೆಟ್​ನಲ್ಲಿ ಮುಸ್ಲಿಂ ಮೀಸಲಾತಿಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಶಾಸಕರು ಸದನ ಬಾವಿಗಿಳಿದು ಬಜೆಟ್ ಪ್ರತಿ ಹರಿದು ಸ್ಪೀಕರ್ ಮೇಲೆ ಎಸೆದು ಪ್ರತಿಭಟನೆ ನಡೆಸಿದ್ದಾರೆ. ಸದನದಲ್ಲಿ ಭಾರೀ ಗದ್ದಲ, ಕೋಲಾಹಲದ ನಡೆವೆ ಬಜೆಟ್​ನ್ನು ಅಂಗೀಕಾರ ಮಾಡಲಾಗಿದೆ. ಹೈಡ್ರಾಮಾ ಮುಂದುವರಿದ ಹಿನ್ನಲೆ ಸ್ಪೀಕರ್ ಯು.ಟಿ.ಖಾದರ್ 10 ನಿಮಿಷಗಳ ಕಾಲ ಕಲಾಪವನ್ನು ಮುಂದೂಡಿದ್ದಾರೆ.

Comments (0)

Your email address will not be published. Required fields are marked *

Back to top button