ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜಾಮೀನು ಪಡೆದು ಹೊರಬಂದ ಬಳಿಕ ನಟ ದರ್ಶನ್ ಡೆವಿಲ್ ಚಿತ್ರದ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ.
ಇದೀಗ ಚಿತ್ರದ ಶೂಟಿಂಗ್ ಬಗ್ಗೆ ಮಾಹಿತಿ ಸಿಕ್ಕಿದ್ದು, ರಾಜಸ್ಥಾನದಲ್ಲಿ ಯಶಸ್ವಿಯಾಗಿ ಚಿತ್ರಿಕರಣ ಮುಗಿಸಿ ನಾಳೆ ಚಿತ್ರತಂಡ ಬೆಂಗಳೂರಿಗೆ ವಾಪಾಸ್ ಆಗಲಿದೆ.
ಇತ್ತೀಚೆಗೆ ಮೈಸೂರಿನಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಮಾಡಲಾಗಿತ್ತು. ಈ ಬೆನ್ನಲ್ಲೇ ರಾಜಸ್ಥಾನಕ್ಕೆ ‘ಡೆವಿಲ್’ ಟೀಮ್ ತೆರಳಿತ್ತು. ಒಂದು ವಾರಗಳ ಕಾಲ ರಾಜಸ್ಥಾನದಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ ದರ್ಶನ್ & ಟೀಮ್. ಹಾಗಾಗಿ ಏ.2ರಂದು ಬೆಂಗಳೂರಿಗೆ ‘ಡೆವಿಲ್’ ಟೀಮ್ ವಾಪಸ್ಸಾಗಲಿದೆ
ಮುಂದಿನ ಹಂತದ ಚಿತ್ರೀಕರಣವು ಹೈದರಾಬಾದ್ನಲ್ಲಿ ನಡೆಯಲಿದೆ. ಸದ್ಯದಲ್ಲೇ ‘ಡೆವಿಲ್’ ಟೀಮ್ ತೆರಳಲಿದೆ. ಅಂದಹಾಗೆ, ಈ ವರ್ಷದ ಅಂತ್ಯದಲ್ಲಿ ಡೆವಿಲ್ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.