Monday, June 23, 2025
25.9 C
Bengaluru
Google search engine
LIVE
ಮನೆಸಿನಿಮಾಕಾಂತಾರ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ಅಭಯ

ಕಾಂತಾರ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ಅಭಯ

ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳಿದ್ದಾರೆ, 5 ತಿಂಗಳು ಗಡುವಲ್ಲಿ ನಿನಗೆ ಒಳ್ಳೆಯದು ಮಾಡುತ್ತೇನೆ ಎಂದು ಪಂಜುರ್ಲಿ ದೈವ ಅಭಯ ನೀಡಿದೆ.

ಪಂಜುರ್ಲಿ ಕೋಲದಲ್ಲಿ ರಾತ್ರಿಯಿಂದ ಬೆಳಗಿನವರೆಗೂ ಪತ್ನಿ ಮತ್ತು ಮಕ್ಕಳೊಂದಿಗೆ ರಿಷಬ್ ಶೆಟ್ಟಿ ಭಾಗಿಯಾಗಿದ್ದಾರೆ. ಉತ್ಸವದ ಕೊನೆಯಲ್ಲಿ ವಾರಾಹಿ ಪಂಜುರ್ಲಿ ಬಳಿ ರಿಷಬ್ ಕಷ್ಟ ಹೇಳಿಕೊಂಡಿದ್ದಾರೆ. ಆಗ ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್‌ಗಳಿದ್ದಾರೆ. ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, 5 ತಿಂಗಳ ಒಳಗೆ ನಿನಗೆ ಒಳ್ಳೆಯದು ಮಾಡುತ್ತೇನೆ ಎಂದು ಪಂಜುರ್ಲಿ ದೈವ ಅಭಯ ನೀಡಿದೆ.

ಅಂದಹಾಗೆ, ‘ಕಾಂತಾರ ಚಾಪ್ಟರ್ 1’ ಸಿನಿಮಾ ಅಕ್ಟೋಬರ್‌ 2ರಂದು ರಿಲೀಸ್‌ ಆಗಲಿದೆ. ಈ ಸಿನಿಮಾದ ಕೆಲಸ ಭರದಿಂದ ನಡೆಯುತ್ತಿದೆ

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments