ಮನರಂಜನೆ

ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟ ಡಿಸಿಎಂ ಪವನ್ ಕಲ್ಯಾಣ್ ಪತ್ನಿ

ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ. ಆಂಧ್ರದಿಂದ​ ಸಿಂಗಾಪುರಕ್ಕೆ ಹೋಗಿದ್ದ ಪವನ್, ಇದೀಗ ಪತ್ನಿ ಅನ್ನಾ ಲೆಜ್ನೆವಾ ಮತ್ತು ಮಕ್ಕಳನ್ನ ಅಲ್ಲಿಂದ ಸುರಕ್ಷಿತವಾಗಿ ವಾಪಸ್ ಕರೆತಂದಿದ್ದಾರೆ. ಈ ಘಟನೆ ನಡೆದ ಬೆನ್ನಲ್ಲೇ ಪತ್ನಿ ಅನ್ನಾ ಸೀದಾ ತಿರುಪತಿಗೆ ಭೇಟಿ ನೀಡಿ, ಪುತ್ರನ ಆರೋಗ್ಯ ಕ್ಷೇಮಕ್ಕಾಗಿ ಮುಡಿ ಕೊಟ್ಟಿದ್ದಾರೆ.

ಹೌದು, ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಪವನೋವಿಚ್‌ ಗಾಯಗೊಂಡಿದ್ದ. 8 ವರ್ಷ ವಯಸ್ಸಿನ ಮಾರ್ಕ್‌ ಶಂಕರ್‌ಗೆ ಅಲ್ಲಿಯೇ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಸಿಂಗಾಪುರಕ್ಕೆ ಹೋಗಿದ್ದ ಪವನ್​ ಕಲ್ಯಾಣ್​, ಪತ್ನಿ ಮತ್ತು ಮಕ್ಕಳನ್ನ ಹೈದರಾಬಾದ್‌ಗೆ ಕ್ಷೇಮವಾಗಿ ಕರೆತಂದಿದ್ದಾರೆ.

Comments (0)

Your email address will not be published. Required fields are marked *

Back to top button