ಪಹಲ್ಗಾಮ್ ದಾಳಿಯ ಕುರಿತಾಗಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ದರಾಗಿದ್ದೇವೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಹಲ್ಗಾಮ್ನಲ್ಲಿ ನಡೆದ ಉಗ್ರರ ಅಟ್ಟ ಹಾಸಕ್ಕೆ 28 ಜನ ಭಾರತೀಯರು ಸಾವನ್ನಪ್ಪಿದ್ದಾರೆ. ಘಟನೆ ಕುರಿತಾಗಿ ನಿನ್ನೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆಸಲಾಯಿತು.ಈ ಸಭೆಯಲ್ಲಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರು ನಾವು ಅದಕ್ಕೆ ಬದ್ದರಾಗಿರುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
- ಪಹಲ್ಗಾಮ್ ದಾಳಿಕೋರರ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುವ ಎಲ್ಲಾ ನಿರ್ಧಾರಗಳಿಗೆ ಬೆಂಬಲ ಘೋಷಿಸಿದ ವಿಪಕ್ಷ ಸದಸ್ಯರು.
- ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮೋದಿ ಸರ್ಕಾರದ ಜೊತೆ ನಿಲ್ಲುವುದಾಗಿ ಭರವಸೆ ನೀಡಿದ ರಾಹುಲ್ ಗಾಂಧಿ.
ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ‘ಪಹಲ್ಗಾಮ್ ಭಯೋತ್ಪಾದಕ ದಾಳಿ ಒಂದು ಅಮಾನವೀಯ ಘಟನೆ. ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಅಮಾಯಕ ನಾಗರಿಕರ ಕುಟುಂಬಸ್ಥರ ನೋವಿನಲ್ಲಿ ನಾವು ಭಾಗಿಯಾಗಿದ್ದೇವೆ. ಈ ದಾಳಿ ಕೈಗೊಂಡವರಿಗೆ ಉಗ್ರ ಶಿಕ್ಷೆಯಾಗಬೇಕಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ‘ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.