ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದಿದ್ದಾರೆ.
ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ 20 ಹಸುಗಳನ್ನು ಕದ್ದೊಯ್ಯಲು ಪ್ರಯತ್ನಿಸಿದ್ದಾರೆ.
ಆದರೆ, ಈ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ದುಷ್ಕರ್ಮಿಗಳು ಹಸುವಿನ ಕೆಚ್ಚಲನ್ನು ಕತ್ತರಿಸಿ ಎಸ್ಕೇಪ್ ಆಗಿದ್ದಾರೆ.
ಕೆಚ್ಚಲು ಕತ್ತರಿಸಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ಹಸು ಮೃತಪಟ್ಟಿದೆ.
ದುಷ್ಕರ್ಮಿಗಳ ಕೃತ್ಯದ ಬಗ್ಗೆ ಯಗಟಿ ಠಾಣೆ ಪೊಲೀಸರಿಗೆ ರೈತ ಶೇಖರಪ್ಪ ದೂರು ನೀಡಿದ್ದಾರೆ.