Top Newsಮಳೆ

ಬೆಂಗಳೂರಿನ ಎಲ್ಲೆಲ್ಲಿ ಏನೇನು ಮಳೆ ಹಾನಿ?

ಬೆಂಗಳೂರು ನಗರದಲ್ಲಿ ರಾತ್ರಿ 10.00 ಗಂಟೆಯಿಂದ ಬೆಳಗ್ಗೆ 6.00 ಗಂಟೆಯವರೆಗೆ ಸರಾಸರಿ 66 ಮಿ.ಮೀ ಮಳೆಯಾಗಿದೆ. ಅತಿ ಹೆಚ್ಚು ಕೆಂಗೇರಿಯಲ್ಲಿ 132 ಮಿ.ಮೀ, ಅತೀ ಕಡಿಮೆ ಗೊಟ್ಟಿಗೆರೆಯಲ್ಲಿ 32 ಮಿ.ಮೀ ಮಳೆಯಾಗಿದೆ

ಮಹದೇವಪುರ ವಲಯ:

* ಮಹದೇವಪುರ ವಲಯದಲ್ಲಿ ಸುಮಾರು 10 ಕಡೆ ಜಲಾವೃತವಾಗಿದ್ದು, ಪ್ರಮುಖವಾಗಿ ಸಾಯಿ ಲೇಔಟ್ ಪ್ರದೇಶವು ಸಂಪೂರ್ಣ ಜಲಾವೃತವಾಗಿದೆ. 6 ಟ್ರ್ಯಾಕ್ಟರ್, 2 ಜೆ.ಸಿ.ಬಿ, 35 ಸಿಬ್ಬಂದಿಗಳು, 3 ಅಗ್ನಿ ಶಾಮಕ ವಾಹನ, ಎಸ್.ಡಿ.ಆರ್.ಎಫ್ ತಂಡದಿಂದ 2 ಬೋಟ್ ವ್ಯವಸ್ಥೆ ಮಾಡಲಾಗಿದೆ.

* ಮಾರತ್ತಹಳ್ಳಿಯ ದೀಪ ನರ್ಸಿಂಗ್ ಹೋಮ್, ಚಿನ್ನಪ್ಪನಹಳ್ಳಿ 5ನೇ ಕ್ರಾಸ್, ಪಣತ್ತೂರ್ ರೈಲ್ವೆ ಕೆಳಸೇತುವೆ, ಗ್ರೀನ್ ಹುಡ್, ಇಬ್ಬಲೂರು ಜಂಕ್ಷನ್, ಬಾಲಾಜಿ ಲೇಔಟ್ – ಕೊತ್ತನೂರು, ಎ. ನಾರಾಯಣಪುರದ ಕೃಷ್ಣ ನಗರ, ಸುನೀಲ್ ಲೇಔಟ್, ಹರಳೂರು, ಬಿ.ಎಸ್‌.ಪಿ ಲೇಔಟ್‌ನ ಕಸವನಹಳ್ಳಿ ಕಡೆಗಳಲ್ಲಿ ರಸ್ತೆಗಳ ಮಲೆ ನೀರು ಮತ್ತು ಮನೆಗಳಿಗೆ ನೀರು ನುಗ್ಗಿರುವ ವರದಿಯಾಗಿದೆ.

ಪೂರ್ವ ವಲಯ:

* ರಾಜಕಾಲುವೆಯಲ್ಲಿ ನೀರು ತುಂಬಿ ಹಿಮ್ಮುಖವಾಗಿ ಚಲಿಸಿರುವ ಪರಿಣಾಮ ಹೆಚ್.ಬಿ.ಆರ್ 5, 6, 7, 8ನೇ ಬ್ಲಾಕ್, ಬೈರಸಂದ್ರ ಲೇಔಟ್, ಕೆಂಪೇಗೌಡ ರಸ್ತೆ, ಕಾಮರಾಜ ನಗರ ಪ್ರದೇಶಗಳು ಜಲಾವೃತವಾಗಿದೆ.

ಬೊಮ್ಮನಹಳ್ಳಿ ವಲಯ:

* ಹೆಚ್.ಎಸ್.ಆರ್ ಲೇಔಟ್ 6 ಮತ್ತು 7ನೇ ಸೆಕ್ಟರ್ ಮತ್ತು ಬನ್ನೇರುಘಟಟ್ಟ ಬಿಳೇಕಲ್ಲಹಳ್ಳಿ ಸಿಗ್ನಲ್ ನ ರಸ್ತೆಯಲ್ಲಿ ನೀರು ನಿಂತಿದೆ. ಯಲಚೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿದೆ

ದಕ್ಷಿಣ ವಲಯ:

* ಕೆ-100, ಕೆ-200 ಬೃಹತ್ ನೀರುಗಾಲುವೆಗಳು ಸಂಪರ್ಕ ಕಲ್ಪಿಸುವ ಸ್ಥಳದಲ್ಲಿ ಅಗಲೀಕರಣ ಕಡಿಮೆ ಇರುವ ಪರಿಣಾಮ ನಿರಿನ ಹರಿವಿನ ಮಟ್ಟ ಹೆಚ್ಚಾಗಿ ಮಡಿವಾಳ, ಡಾಲರ್ಸ್ ಕಾಲೋನಿ, ಕೋರಮಂಗಲದ 6ನೇ ಬ್ಲಾಕ್, ಈಜೀಪುರ ಪ್ರದೇಶಗಳು ಜಲಾವೃತವಾಗಿದೆ.

* ವೃಷಭಾವತಿ ವ್ಯಾಲಿ ಗಾಳಿ ಆಂಜನೇಯ ದೇವಸ್ಥಾನದ ಬಳಿ ಜಲಾವೃತವಾಗಿ ಮನೆಗಳಿಗೆ ನೀರು ನುಗ್ಗಿದೆ

ಯಲಹಂಕ ವಲಯ:

* ಟಾಟಾ ನಗರ, ಚೌಡೇಶ್ವರಿ ನಗರದ ಅಟ್ಟೂರು ವ್ಯಾಪ್ತಿಯಲ್ಲಿ ಸುಮಾರು 15 ಮನೆಗಳಿಗೆ, ಡಿಫೆನ್ಸ್ ಲೇಔಟ್ ಹಾಗೂ ದ್ವಾರಕಾ ನಗರದಲ್ಲಿ ಸುಮಾರು 5 ಮನೆಗಳಿಗೆ ನೀರು ನುಗ್ಗಿದೆ

ರಾಜರಾಜೇಶ್ವರಿ ನಗರ ವಲಯ:

* ಐಡಿಯಲ್ಸ್ ಹೋಮ್ಸ್ 1ನೇ ಎ ಕ್ರಾಸ್ ವೃಷಭಾವತಿ ವ್ಯಾಲಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ 3 ಹಸು, 1 ಕರು ಹಾಗೂ 1 ಎಮ್ಮೆ ಸೇರಿ 5 ಜಾನುವಾರಗಳು ಮೃತಪಟ್ಟಿವೆ.

* ವಿಜಯಶ್ರೀ ಬಡಾವಣೆ- ಹೆಮ್ಮಿಗೆಪುರ ರಾಜಕಾಲುವೆಯಲ್ಲಿ ನೀರು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಜಲಾವೃತವಾಗಿದೆ

* ಕೆಂಗೇರಿ ಬಳಿಯ ಕೋಟೆ ಲೇಔಟ್ ನಲ್ಲಿ ಸುಮಾರು 100 ಮನೆಗಳಿಗೆ ನೀರು ನುಗ್ಗಿದೆ

ದಾಸರಹಳ್ಳಿ ವಲಯ:

* ಕೆ.ಜಿ ಹಳ್ಳಿ, ಡಿಫೆನ್ಸ್ ಕಾಲೋನಿ, ಮೇಡರಹಳ್ಳಿಯ ಶ್ರೀದೇವಿ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ

* ರುಕ್ಮಿಣಿ ನಗರ, ವಿದ್ಯಾನಗರ, ಬಿ.ಟಿ.ಎಸ್ ಲೇಔಟ್ ಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದೆ

ಪಶ್ಚಿಮ ವಲಯ:

* ಕೆ.ಪಿ ಅಗ್ರಹಾರದಲ್ಲಿ ರಾಜಕಾಲುವೆಯಲ್ಲಿ ನೀರಿನ ಹರಿವಿನ ಮಟ್ಟ ಹೆಚ್ಚಾಗಿ 20 ಮನೆಗಳಿಗೆ ನೀರು ನುಗ್ಗಿದೆ

ಧರೆಗುರುಳಿದ ಮರಗಳ ತೆರವು ಕಾರ್ಯಾಚರಣೆ:

* ರಾತ್ರಿ ಸುರಿದ ಮಳೆಯಿಂದಾಗಿ 27 ಮರಗಳು, 43 ಮರದ ರೆಂಬೆ/ಕೊಂಬೆಗಳು ಧರೆಗುರುಳಿವೆ.

ಯಲಹಂಕ ವಲಯದ ಎಲ್ಲಾ ಕೆರೆಗಳು ಭರ್ತಿ:

ಯಲಹಂಕ ವಲಯ ವ್ಯಾಪ್ತಿಯಲ್ಲಿ 29 ಕೆರೆಗಳು ಬರಲಿದ್ದು, ಎಲ್ಲಾ ಕೆರೆಗಳು ಕೂಡ ಸಂಪೂರ್ಣವಾಗಿ ತುಂಬಿವೆ.

Comments (0)

Your email address will not be published. Required fields are marked *

Back to top button