ಕೊಲೆ ಹಾಗೂ ವರದಕ್ಷಿಣೆ ಕೇಸ್ನಲ್ಲಿ ಮಾಜಿ ಸಚಿವನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.ಎಸ್.ಎಂ.ಕೃಷ್ಣ ಅವಧಿಯಲ್ಲಿ ಸಚಿವರಾಗಿದ್ದ ವೀರಕುಮಾರ್ ಪಾಟೀಲ್ ಅವರ ಪುತ್ರನನ್ನು ಅರೆಸ್ಟ್ ಮಾಡಲಾಗಿದೆ.
ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ವೈಷ್ಣವಿ ಕೊಲೆ ಪ್ರಕರಣ ಭಾರೀ ಸಂಚಲನ ಮೂಡಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಆಪ್ತ ಮಾಜಿ ಸಚಿವ ವೀರಕುಮಾರ್ ಪಾಟೀಲ್ ಪುತ್ರ ಪ್ರೀತಮ್ ನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.
ವೈಷ್ಣವಿ ಹಗವಣೆ ವರದಕ್ಷಿಣೆ ಕಿರುಕುಳ, ಕೊಲೆ ಪ್ರಕರಣದ ಆರೋಪಿಗಳಾಗಿದ್ದ ವೈಷ್ಣವಿ ಮಾವ ರಾಜೇಂದ್ರ, ಮೈದುನ ಸುಶೀಲ್ಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಮಡಿದ ಆರೋಪದಲ್ಲಿ ಪ್ರೀತಮ್ ಪಾಟೀಲ್ ಬಂಧನವಾಗಿದೆ.