ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಚಾಂಪಿಯನ್ RCB ತಂಡ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ. ಅಹಮದಾಬಾದ್ನಿಂದ ಆರ್ಸಿಬಿ ಟೀಂ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 1.30 ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಬಳಿಕ ತಾಜ್ ವೆಸ್ಟೆಂಡ್ ಹೋಟೆಲ್ಗೆ ತೆರಳಿ ಕೆಲ ಕಾಲ ವಿರಮಿಸಲಿದ್ದಾರೆ
ಸಂಜೆ 3.30 ಕ್ಕೆ ಬೆಂಗಳೂರಿನ ವಿಧಾನಸೌಧಕ್ಕೆ ಆಗಮಿಸಲಿರುವ ಆರ್ಸಿಬಿ ಟೀಂ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ. ಇದಾದ ಬಳಿಕ ಸಂಜೆ 4 ಗಂಟೆ ಬಳಿಕ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ತೆರೆದ ವಾಹನದಲ್ಲಿ ವಿಜಯ ಯಾತ್ರೆ ನಡೆಸಲಿದ್ದಾರೆ.
ಆರ್ಸಿಪಿ ಟೀಂನ ಈ ವಿಕ್ಟರಿ ಪರೇಡ್ನಲ್ಲಿ ಲಕ್ಷಾಂತರ ಅಭಿಮಾನಿಗಳು ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದಾದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಟೀಂ ಸಂಭ್ರಮಾಚರಣೆ ನಡೆಸಿ ಗೆದ್ದು ತಂದ ಟ್ರೋಫಿಯನ್ನ ಪ್ರದರ್ಶಿಸಲಿದ್ದಾರೆ.