Saturday, June 28, 2025
23.3 C
Bengaluru
Google search engine
LIVE
ಮನೆರಾಜ್ಯತಿರುಪತಿಗೆ ಕರ್ನಾಟಕದಿಂದ ಹೊಸ ರೈಲು - ಗುಡ್​ ನ್ಯೂಸ್ ಕೊಟ್ಟ ಸೋಮಣ್ಣ

ತಿರುಪತಿಗೆ ಕರ್ನಾಟಕದಿಂದ ಹೊಸ ರೈಲು – ಗುಡ್​ ನ್ಯೂಸ್ ಕೊಟ್ಟ ಸೋಮಣ್ಣ

ತಿರುಮಲದ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ತೆರಳುವ ಭಕ್ತರಿಗಾಗಿ ಕೇಂದ್ರ ಸರ್ಕಾರ ಗುಡ್​ ನ್ಯೂಸ್ ಕೊಟ್ಟಿದೆ. ಕರ್ನಾಟಕದಿಂದ ತಿರುಪತಿಗೆ ಹೊಸ ರೈಲೊಂದು ಇನ್ಮುಂದೆ ಸಂಚರಿಸಲಿದೆ. ಕೇಂದ್ರ ಸಚಿವ ವಿ.ಸೋಮಣ್ಣ ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಇದು ಮಲೆನಾಡು, ತುಮಕೂರು, ಬೆಂಗಳೂರು ಮತ್ತು ಕೋಲಾರದ ಭಕ್ತರಿಗೆ ಇದು ಅನುಕೂಲವಾಗಲಿದೆ.

ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಜನತೆ ಈ ವಾರದ ರೈಲಿನ ಸೌಲಭ್ಯ ಪಡೆದುಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.

https://x.com/VSOMANNA_BJP/status/1938841431210115245

ತಿರುಪತಿ ರೈಲು ವೇಳಾಪಟ್ಟಿ

ಚಿಕ್ಕಮಗಳೂರು-ತಿರುಪತಿ (ರೈಲು ಸಂಖ್ಯೆ 17424): ಈ ರೈಲು ಪ್ರತಿ ಶುಕ್ರವಾರ ಸಂಜೆ 05:30 ಚಿಕ್ಕಮಗಳೂರಿನಿಂದ ಹೊರಡಲಿದ್ದು, ಶನಿವಾರ ಬೆಳಿಗ್ಗೆ 07:40ಕ್ಕೆ ತಿರುಪತಿ ತಲುಪಲಿದೆ.

ತಿರುಪತಿ-ಚಿಕ್ಕಮಗಳೂರು (ರೈಲು ಸಂಖ್ಯೆ 17423): ಈ ರೈಲು ಪ್ರತಿ ಗುರುವಾರ ರಾತ್ರಿ 09 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು, ಮರುದಿನ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ತಲುಪಲಿದೆ.

ನಿಲ್ದಾಣಗಳು
ತಿರುಪತಿ, ಚಿತ್ತೂರು, ಕಟ್ಟಾಡಿ, ಕುಪ್ಪಂ, ಬಂಗಾರಪೇಟೆ, ವೈಟ್‌ಫೀಲ್ಡ್, ಕೆ ಆರ್ ಪುರಂ, ಎಸ್‌ಎಂವಿಬಿ ಬೆಂಗಳೂರು, ಚಿಕ್ಕ ಬಾಣಾವರ, ತುಮಕೂರು, ತಿಪಟೂರು, ಅರಸೀಕೆರೆ, ದೇವನೂರು, ಬಿರೂರು, ಕಡೂರು, ಬಿಸಲೇಹಳ್ಳಿ, ಸಕರಾಯಪಟ್ಟಣ, ಚಿಕ್ಕಮಗಳೂರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments