Sunday, December 7, 2025
21.2 C
Bengaluru
Google search engine
LIVE
ಮನೆಜಿಲ್ಲೆಚಿಂಚೋಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ; ಅವಾಂತರ

ಚಿಂಚೋಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ; ಅವಾಂತರ

ಕಲಬುರಗಿ: ಉತ್ತರ ಕರ್ನಾಟಕ ಭಾಗದಲ್ಲಿ ವರುಣ ಆರ್ಭಟ ಜೋರಾಗಿದೆ. ಕಳೆದ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಚಿಂಚೋಳಿ ತಾಲೂಕಿನ ಹಲವಡೆ ಜಲಾವೃತವಾಗಿದೆ.

ಭಾರಿ ಮಳೆಯಿಂದ ಬೂತಪುರ ಬಳಿ ಸೇತುವೆ ತುಂಬಿ ಹರಿಯುತ್ತಿದ್ದು, ಬೂತಪುರ , ರುದ್ನೂರ, ರಾಯಕೋಡ, ಚಿಂತಪಳ್ಳಿ, ಬೆನಕೇಪಲ್ಲಿ ರಸ್ತೆ ಸಂಚಾರ  ಸ್ಥಗಿತಗೊಂಡಿದೆ. ಇದರಿಂದ ವಿದ್ಯಾರ್ಥಿಗಳು, ವಾಹನ ಸವಾರರು ಪರವಾಡುವಂತಾಗಿದೆ.

ಚಿಂಚೋಳಿ ತಾಲೂಕಿನ ರತ್ನೂರು ಗ್ರಾಮದಲ್ಲಿ ಅಧಿಕ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಮಳೆಯಿಂದ ಹಲವು ಕಡೆಯ ರಸ್ತೆಗಳು ಜಲಾವೃತಗೊಂಡಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ.

ಚಿಂಚೋಳಿ ತಾಲೂಕಿನಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ರುದ್ನೂರು ಗ್ರಾಮದ ಪ್ರಸಿದ್ಧ ತೋಂಟದಾರೆ ಸಿದ್ಧೇಶ್ವರ ದೇವಸ್ಥಾನ ಬಳಿಯ ನಾಲೆ ತುಂಬಿ ಹರಿಯುತ್ತಿದ್ದು, ನಾಲೆಯ ನೀರು ದೇವಸ್ಥಾನದ ಪ್ರಾಂಗಣಕ್ಕೂ ನೀರು ನುಗ್ಗಿದ್ದು ಸಂಪೂರ್ಣ ಜಲಾವೃತವಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments