ತುಮಕೂರು : ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.
ಚುನಾವಣೆಗೂ ಮೊದಲೆ ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ನೀಡಿತ್ತು. ತುಮಕೂರು ಅತೀ ಹೆಚ್ಚು ತೆಂಗು ಬೆಳೆಗಾರರಿರುವ ಜಿಲ್ಲೆಯಲ್ಲಿ 18 ಸಾವಿರದಿಂದ 8 ಸಾವಿರಕ್ಕೆ ಕೊಬ್ಬರಿ ಬೆಲೆ ಇಳಿದಿದೆ. ಇದೇ ಜ. 20 ರಿಂದ ನಫೆಡ್ ಮೂಲಕ ಕೊಬ್ಬರಿ ಖರೀದಿ ಆರಂಭ ಹಿನ್ನಲೆಯಲ್ಲಿ 250 ರೂ ಹೆಚ್ಚಳ ಮಾಡಿ 12000 ಸಾವಿರಕ್ಕೆ ಕೊಬ್ಬರಿ ಖರೀದಿಸಲಾಗಿದೆ. ಹೆಚ್ಚುವರಿ 3 ಸಾವಿರಕ್ಕೆ ರಾಜ್ಯ ಸರ್ಕಾರ ನೀಡುವಂತೆ ಒತ್ತಾಯಿಸಿ ರೈತರು ಧರಣಿ ನಡೆಸಿದರು.