Wednesday, September 10, 2025
27.2 C
Bengaluru
Google search engine
LIVE
ಮನೆ#Exclusive NewsTop Newsಗ್ಯಾಂಗ್‌ ರೇಪ್‌ ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು

ಗ್ಯಾಂಗ್‌ ರೇಪ್‌ ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು

ಬೆಳಗಾವಿ: ಗ್ಯಾಂಗ್‌ ರೇಪ್‌ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ರಮೇಶ್ ವಿರುದ್ಧ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಸೇರಿ ಹಲವು ಪ್ರಕರಣಗಳು ದಾಖಲಾಗಿದ್ದವು.

ಈ ಹಿನ್ನೆಲೆ ಇಂದು ಮುಂಜಾನೆ 6 ಗಂಟೆಗೆ ಆರೋಪಿ ರಮೇಶ್‌ ಕಿಲ್ಲಾರ್‌ ಬಂಧನಕ್ಕೆ ಪೊಲೀಸರು ತೆರಳಿದ್ದಾಗ ಆರೋಪಿ ಪೊಲೀಸ್‌ ಪೇದೆ ಷರೀಫ್‌ ದಫೇದಾರ್‍ಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಪಿಎಸ್‌ಐ ಪ್ರವೀಣ್‌ ಗೊಂಗೊಳ್ಳಿ ಎಚ್ಚರಿಕೆ ನೀಡಿದ್ದಾರೆ. ಆರೋಪಿ ಪೊಲೀಸರ ಎಚ್ಚರಿಕೆಯನ್ನು ಕಡೆಗಣಿಸಿ, ಪರಾರಿಯಾಗಲು ಯತ್ನಿಸಿದಾಗ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡ ಆರೋಪಿಯನ್ನು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments