Wednesday, September 10, 2025
26.9 C
Bengaluru
Google search engine
LIVE
ಮನೆ#Exclusive NewsTop Newsಬಿಜೆಪಿಯಲ್ಲಿಯೇ ಯತ್ನಾಳ್‌ ಅವರ ಮಾತಿಗೆ ಬೆಲೆ ಕೊಟ್ಟಿಲ್ಲ- ಪ್ರಿಯಾಂಕ್‌ ಖರ್ಗೆ

ಬಿಜೆಪಿಯಲ್ಲಿಯೇ ಯತ್ನಾಳ್‌ ಅವರ ಮಾತಿಗೆ ಬೆಲೆ ಕೊಟ್ಟಿಲ್ಲ- ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ಹೋಗೋಕೆ ಸಿದ್ಧತೆ ಮಾಡಿದ್ರು ಎಂಬ ಬಸನಗೌಡ ಪಾಟೀಲ್‌ ಯತ್ನಾಳ್ ಆರೋಪಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯಿಂದ ಉಚ್ಛಾಟನೆ ಆಗಿರೋ ಯತ್ನಾಳ್ ಮೊದಲು ಯಾಕೆ ಉಚ್ಛಾಟನೆ ಆದ್ರು ಅಂತ ತಿಳಿದುಕೊಳ್ಳಲಿ. ಅಮೇಲೆ ನಮ್ಮ ಪಕ್ಷ, ನಮ್ಮ ಅಧ್ಯಕ್ಷರು, ನಮ್ಮ ಸಿಎಂ ಬಗ್ಗೆ ಮಾತಾಡಲಿ. ಬಿಜೆಪಿಯಲ್ಲಿರುವವರಿಗೆ ಸ್ವಂತಕ್ಕೆ ಅಸೆಸ್‌ಮೆಂಟ್ ಮಾಡೋಕೆ ಆಗಿಲ್ಲ. ಅವರು ಬಿಜೆಪಿಯಲ್ಲಿ ಉಳಿತಾರೋ ಇಲ್ಲವೋ ಅವರಿಗೇ ಗೊತ್ತಿಲ್ಲ. ಅವರು ನಮ್ಮ ಅಧ್ಯಕ್ಷರ ಬಗ್ಗೆ ವಿಮರ್ಶೆ ಮಾಡ್ತಾರಾ ಎಂದು ಪ್ರಶ್ನಿಸಿದ್ದಾರೆ.

ಯತ್ನಾಳ್ ಯಾಕೆ ಹೊರಗೆ ಹೋಗಿದ್ದಾರೆ ಅಂತ ಇನ್ನು ಅವರಿಗೆ ಗೊತ್ತಿಲ್ಲ. ಬಿಜೆಪಿಯಲ್ಲಿ ಯಾರು ಹೊರಗೆ ಹೋಗ್ತಾರೆ, ಒಳಗೆ ಬರ್ತಾರೆ ಅಂತ ಅವರಿಗೆ ಗೊತ್ತಾಗುತ್ತಾ? ಅವರು ಸೆಲ್ಫ್ ಅಸೆಸ್‌ಮೆಂಟ್ ಅಲ್ಲೇ ವಿಫಲರಾಗಿದ್ದಾರೆ. ಇವರೆಲ್ಲ ನಮ್ಮ ಪಕ್ಷ, ಸಿಎಂ ಹಾಗೂ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಅಸೆಸ್ ಮಾಡ್ತಾರಾ ಎಂದು ಕಿಡಿಕಾರಿದ್ದಾರೆ.

ಇವರನ್ನ ಯಾಕೆ ಹೊರಗೆ ಹಾಕಿದ್ದಾರೆ ಅದನ್ನ ಮೊದಲು ಯತ್ನಾಳ್ ಹೇಳಲಿ. ಅವರನ್ನ ಪಕ್ಷದಿಂದಲೇ ತೆಗೆದು ಹಾಕಿದ್ದಾರೆ. ಅವರ ಮಾತಿಗೆ ಹೆಚ್ಚು ಬೆಲೆ ಕೊಡಬೇಡಿ. ಬಿಜೆಪಿಯಲ್ಲಿಯೇ ಅವರ ಮಾತಿಗೆ ಬೆಲೆ ಕೊಟ್ಟಿಲ್ಲ. ಇನ್ನು ನಮ್ಮ ಬಗ್ಗೆ ಮಾತಾಡಿದ್ರೆ ಯಾಕೆ ಬೆಲೆ ಕೊಡ್ತೀರಾ ಎಂದು ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments