ಬೆಂಗಳೂರು: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬ ಕಾಮುಕನನ್ನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ..
ಜಕ್ಕೂರು ಮುಖ್ಯರಸ್ತೆಯಲ್ಲಿ ಅಪಘಾತಕ್ಕೆ ಒಳಗಾಗಿದ್ದ ಶ್ವಾನವನ್ನು ರಕ್ಷಿಸುತ್ತಿದ್ದ ಯುವತಿಯ ಖಾಸಗಿ ಅಂಗವನ್ನು ಮುಟ್ಟಿ ಪರಾರಿಯಾಗಿದ್ದ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಳು. ಹೀಗಾಗಿ ಆರೋಪಿ ಮಂಜುನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ..
ಈ ಘಟನೆ ಸೆ.7ರಂದು ರಾತ್ರಿ 11.50ರ ಸುಮಾರಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಕ್ಕೂರು ಮುಖ್ಯರಸ್ತೆಯಲ್ಲಿ ಶ್ವಾನ ಒಂದು ಅಪಘಾತಕ್ಕೆ ಒಳಗಾಗಿತ್ತು. ಹೀಗಾಗಿ ಕಾರು ನಿಲ್ಲಿಸಿ ಶ್ವಾನದ ರಕ್ಷಣೆಗೆ ಯುವತಿ ಮುಂದಾಗಿದ್ದಳು. ಈ ವೇಳೆ ಬೈಕ್ನಲ್ಲಿ ಬಂದಿದ್ದ ಆರೋಪಿ, ಬ್ಯಾಡ್ ಟಚ್ ಮಾಡಿ ತೆರಳಿದ್ದ. ಸ್ವಲ್ಪ ಹೊತ್ತಿನ ಬಳಿಕ ಮತ್ತೆ ಬಂದು ಯುವತಿಯ ಖಾಸಗಿ ಅಂಗ ಮುಟ್ಟಿ ಪರಾರಿ ಆಗಿದ್ದ. ಈ ಸಂಬಂಧ ಯುವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


