Thursday, November 20, 2025
19.9 C
Bengaluru
Google search engine
LIVE
ಮನೆರಾಜ್ಯಮನೆಕೆಲಸದಾಕೆ ನಾಯಿ ಮರಿಯನ್ನು ಎತ್ತಿ ನೆಲಕ್ಕೆ ಬಡಿದು ಕೊಲೆ

ಮನೆಕೆಲಸದಾಕೆ ನಾಯಿ ಮರಿಯನ್ನು ಎತ್ತಿ ನೆಲಕ್ಕೆ ಬಡಿದು ಕೊಲೆ

ಬೆಂಗಳೂರು: ನಾಯಿಮರಿಯನ್ನು ಮನೆಕೆಲಸದಾಕೆಯೊಬ್ಬಳು ಲಿಫ್ಟ್​​ ನಲ್ಲಿ ನಾಯಿಯನ್ನು ಎತ್ತಿ ನೆಲಕ್ಕೆ ಜೋರಾಗಿ ಬಡಿದು ಸಾಯಿಸಿರುವ ಘಟನೆ ಬಾಗಲೂರಿನ ಅಪಾರ್ಟ್​​​ ಮೆಂಟ್​​ವೊಂದರಲ್ಲಿ ನಡೆದಿದೆ..

ಅಕ್ಟೋಬರ್ 31ರಂದು ಘಟನೆ ನಡೆದಿದ್ದು, ಲಿಫ್ಟ್‌ನ ಸಿಸಿ ಕ್ಯಾಮೆರಾದಲ್ಲಿ ಮಹಿಳೆಯ ಅಮಾನವೀಯ ಕೃತ್ಯ ಸೆರೆಯಾಗಿದೆ. ಪುಷ್ಪಲತಾ ಎಂಬ ಮಹಿಳೆ ಈ ಕೃತ್ಯವೆಸಗಿದ್ದಾಳೆ. ಪುಟ್ಟ ನಾಯಿಮರಿಯನ್ನು ನೋಡಿಕೊಳ್ಳುವುದಕ್ಕೆಂದೇ ಕೆಲಸಕ್ಕಿದ್ದ ಮಹಿಳೆ ಅಮಾನವೀಯ ಕೃತ್ಯ ಎಸಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಿಸಿಟಿವಿ ದೃಶ್ಯ ವೈರಲ್ಆಗಿದ್ದು, ಮಹಿಳೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ..

ಎಂಬಿಎ ವಿದ್ಯಾರ್ಥಿನಿಯಾಗಿರುವ ರಾಶಿ ಪೂಜಾರಿ ಎಂಬವರು 4 ವರ್ಷದ ಹಿಂದೆ ಚಿಹೋವಾ ತಳಿಯ ಪುಟ್ಟ ಶ್ವಾನವನ್ನು ತಂದಿದ್ದು, ಸಾಕಿದ್ದರು. ನಾಯಿ ನೋಡಿಕೊಳ್ಳಲೆಂದೇ ಪುಷ್ಪಾಲತಾಳನ್ನು ನೇಮಿಸಲಾಗಿತ್ತು. ಆದರೆ ಪುಷ್ಪಲತಾ ನಾಯಿಯನ್ನು ಸಾಯಿಸಿ, ಬಳಿಕ ಲಿಫ್ಟ್ ಇಂದ ಹೊರಗೆ ಹೋಗಿ ಬಿತ್ತು ಎಂದು ಪುಷ್ಪಾಲತಾ ಕಥೆ ಕಟ್ಟಿದ್ದಳು. ಈ ಬಗ್ಗೆ ಶ್ವಾನದ ಮಾಲಕಿ ಸೆಕ್ಯೂರಿಟಿ ಬಳಿ ವಿಚಾರಿಸಿದಾಗ ಮಾಹಿತಿ ದೊರಕಿದೆ. ಅನುಮಾನ ಬಂದು ಸಿಸಿಟಿವಿ ಪರಿಶೀಲನೆ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಪುಷ್ಪಲತಾ ವಿರುದ್ಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments