Tuesday, June 24, 2025
25.9 C
Bengaluru
Google search engine
LIVE
ಮನೆರಾಜ್ಯಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಟ್ರಸ್ಟ್ ನಿಂದ ಅಧಿಕೃತ ಘೋಷಣೆ; ಅರುಣ್ ಕುಟುಂಬದಲ್ಲಿ...

ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಟ್ರಸ್ಟ್ ನಿಂದ ಅಧಿಕೃತ ಘೋಷಣೆ; ಅರುಣ್ ಕುಟುಂಬದಲ್ಲಿ ಸಂತಸ

ಮೈಸೂರು ; ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ಮೂರ್ತಿಯನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಂತಿಮಗೊಳಿಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಈ ಬಗ್ಗೆ ಅರುಣ್ ಯೋಗಿರಾಜ್ ಪತ್ನಿ ವಿಜೇತ ಮಾತನಾಡಿ ನಾನು ಮೂರ್ತಿ ಮಾಡಲಿಲ್ಲ ದೇವರೇ ಮೂರ್ತಿಯನ್ನು ಮಾಡಿಸಿದ್ದು ಎಂದು ಅರುಣ್ ಹೇಳುತ್ತಿದ್ದರು ಎಂಬುದಾಗಿ ತಿಳಿಸಿದ್ದಾರೆ.

ಕೆತ್ತನೆ ಶುರುಮಾಡಿದ ದಿನದಿಂದಲೇ ಯೋಗಿರಾಜ್ ಮೂರ್ತಿಯೆ ಆಯ್ಕೆಯಾಗಬಹುದು ಎಂಬುದಾಗಿ ಅನಿಸಿತ್ತು. ಅರುಣ್ ಕುಟುಂಬದ ಹೆಸರನ್ನು ಉಳಿಸಿದ್ದಾರೆ. ನಮಗೆ ಇದು ಹೆಮ್ಮೆಯ ವಿಚಾರ. ಅರುಣ್ ತಂದೆ‌ ಹಾಗೂ ತಾತ ಇಬ್ಬರೂ ಶಿಲ್ಪಿಗಳೇ. ತಂದೆ ರಾಷ್ಟ್ರೀಯ ಪ್ರಶಸ್ತಿ ವಿಜೇತರು ಎಂದು ವಿಜೇತ ಹೇಳಿದ್ದಾರೆ.

ರಾಮಲಲ್ಲಾ ಮೂರ್ತಿ ಬಹಳ ಸುಂದರವಾಗಿ ಮೂಡಿ ಬಂದಿದೆ. ಐದು ವರ್ಷದ ಬಾಲಕನ ರೀತಿ ಭಾವ ಇದೆ. ಅದನ್ನು ಕೆತ್ತನೆ ಮಾಡುವ ಸಂದರ್ಭದಲ್ಲಿ ಅರುಣ್ ಸಾಕಷ್ಟು ಅಧ್ಯಯನ ಮಾಡಿದ್ದರು. ಮಕ್ಕಳ ಭಾವ, ದೇಹದ ರೂಪವನ್ನು ಗಮನಿಸುತ್ತಿದ್ದರು.

ಮೂರ್ತಿ ಕೆತ್ತನೆ ಬಹಳ ಕಷ್ಟದ ಕೆಲಸವಾಗಿತ್ತು. ಕಾಲ್ಪನಿಕವಾಗಿದ್ದರಿಂದ ಹೇಗೆ ಮೂಡಿ ಬರಬಹುದು ಅಂತ ಗೊತ್ತಿರಲಿಲ್ಲ ಎಂದರು. ಈ ಮಧ್ಯೆ, ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ಮೂರ್ತಿ ಆಯ್ಕೆಯಾಗಿರುವುದಕ್ಕೆ ಅವರ ತಾಯಿ ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ. ಕಳೆದ ಆರು ತಿಂಗಳು ಆತ ಏನು ಮಾಡಿದ್ದನೋ ಅದಕ್ಕೆ ಈಗ ಫಲಿತಾಂಶ ಬಂದಿದೆ. ನನಗೆ ತುಂಬಾ ಖುಷಿಯಾಗಿದೆ ಎಂದು ಅವರು ಹೇಳಿದರು.

ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ಮೂರ್ತಿಯೇ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದೆ ಎಂಬುದು ಈ ಹಿಂದೆಯೇ ಬಹಿರಂಗಗೊಂಡಿತ್ತು. ಆದರೆ, ಅಧಿಕೃತ ಘೋಷಣೆಯಾಗಿರಲಿಲ್ಲ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿನ್ನೆ ಸೋಮವಾರ ಅಧಿಕೃತ ಘೋಷಣೆ ಮಾಡಿತ್ತು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments