ರಾಜ್ಯಸುದ್ದಿ

ಗಾಳಿಪಟ ಹಿಡಿಯಲು ಹೋಗಿ ಜೀವ ತೆತ್ತ ಯುವಕ: ಕಟ್ಟಡದ ಮೇಲಿಂದ ಬಿದ್ದು ಸಾವು

ಹುಮನಾಬಾದ್: ಹಾರಾಡುತ್ತಿದ್ದ ಗಾಳಿಪಟವನ್ನು ಹಿಡಿಯಲು ಹೋಗಿ ಆಯತಪ್ಪಿ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೀದರ್​ ಜಿಲ್ಲೆಯ ಹುಮ್ನಾಬಾದ್​ ಪಟ್ಟಣದ ವಾಂಜರಿ ಬಡಾವಣೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಶಶಿಕುಮಾರ್ ಶಿವಾನಂದ ಡೊಂಗರಗಾಂವ್ (19) ಎಂದು ಗುರುತಿಸಲಾಗಿದೆ. ಸಂಕ್ರಾಂತಿ ಸಂಭ್ರಮದ ಹಿನ್ನೆಲೆಯಲ್ಲಿ ಶಶಿಕುಮಾರ್ ತನ್ನ ಸ್ನೇಹಿತರೊಂದಿಗೆ ಗಾಳಿಪಟ ಹಾರಿಸಲು ಕಟ್ಟಡವೊಂದರ ಶೆಡ್ ಮೇಲೆ ಹತ್ತಿದ್ದ ಎನ್ನಲಾಗಿದೆ.

ಗಾಳಿಪಟ ಹಾರಿಸುವಾಗ ದಾರ ತುಂಡಾಗಿದ್ದು, ಈ ವೇಳೆ ಹಾರಿಹೋಗುತ್ತಿದ್ದ ಗಾಳಿಪಟ ಹಿಡಿಯಲು ಹೋಗಿ, ಕಟ್ಟಡದ ಮೇಲಿಂದ ಬಿದ್ದಿದ್ದಾನೆ. ತೀವ್ರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

Comments (0)

Your email address will not be published. Required fields are marked *

Back to top button