Friday, September 12, 2025
27.7 C
Bengaluru
Google search engine
LIVE
ಮನೆಜಿಲ್ಲೆಮಂಡ್ಯ ಸುಂದರಿ ಸಾವಿನ ಸುತ್ತ: ಹೇಗೆ ಸತ್ತಳು ಆ ಅತಿಥಿ ಶಿಕ್ಷಕಿ..?

ಮಂಡ್ಯ ಸುಂದರಿ ಸಾವಿನ ಸುತ್ತ: ಹೇಗೆ ಸತ್ತಳು ಆ ಅತಿಥಿ ಶಿಕ್ಷಕಿ..?

ಮಂಡ್ಯ :  ವಿವಾಹಿತ ಯುವತಿಯೊಬ್ಬಳ ಶವ ಮಣ್ಣಿನಲ್ಲಿ ಹೂತಿಟ್ಟ ರೀತಿ ಪತ್ತೆಯಾಗಿದೆ. ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ದೇವಾಲಯ ಇರುವ ಬೆಟ್ಟದ ತಪ್ಪಲಿನಲ್ಲಿಯೇ ಶಿಕ್ಷಕಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆಯಾದ ರೀತಿ ಹಾಗೂ ಕಾರಣಗಳ ಬಗ್ಗೆ ಕುತೂಹಲ ಕೆರಳಿಸಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಘಟನೆ ನಡೆದಿದೆ. ಮಾಣಿಕ್ಯನಹಳ್ಳಿಯ ದೀಪಿಕಾ (28) ಕೊಲೆಯಾಗಿರುವ ಯುವತಿ. ಈಕೆ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದರು. ಮಾಣಿಕ್ಯನಹಳ್ಳಿಯ ವೆಂಕಟೇಶ್ ಎಂಬವರ ಮಗಳಾಗಿರುವ ದೀಪಿಕಾ ಅವರನ್ನು ಅದೇ ಗ್ರಾಮದ ಲೋಕೇಶ್ ಎಂಬವರ ಜೊತೆ ಮದುವೆ ಮಾಡಿಸಲಾಗಿತ್ತು. ದಂಪತಿಗಳಿಗೆ 8 ವರ್ಷದ ಮಗು ಸಹ ಇದೆ.

ಶಿಕ್ಷಕಿ ಶನಿವಾರ ಮಧ್ಯಾಹ್ನ ತರಗತಿ ಮುಗಿಸಿ ಸ್ಕೂಟರ್‌ನಲ್ಲಿ ವಾಪಸ್ ಮನೆಗೆ ಹೊರಟಿದ್ದರು. ಆದರೆ ಶನಿವಾರ ಸಂಜೆ ವೇಳೆ ಸ್ಕೂಟರ್ ಬೆಟ್ಟದ ತಪ್ಪಲಿನಲ್ಲಿ ನಿಂತಿರುವುದು ಪತ್ತೆಯಾಗಿತ್ತು. ಬೆಟ್ಟದ ತಪ್ಪಲಿನಲ್ಲಿ ಸ್ಕೂಟರ್‌ ನಿಂತಿರುವುದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಅದರ ನಂಬರ್ ನೆರವಿನಿಂದ ಶಿಕ್ಷಕಿಯ ಊರು ಪತ್ತೆ ಹಚ್ಚಿ ಮನೆಗೆ ಮಾಹಿತಿ ನೀಡಿದ್ದರು.
ಇಂದು ಅದೇ ಬೆಟ್ಟದ ತಪ್ಪಲಿನಲ್ಲಿ ಹೂತಿಟ್ಟ ರೀತಿಯಲ್ಲಿ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಯಕ್ತಿಕ ದ್ವೇಷ, ಸುಲಿಗೆ, ಅತ್ಯಾಚಾರ ಮತ್ತಿತರ ಕೋನಗಳಲ್ಲಿ ತನಿಖೆ ನಡೆಯುತ್ತಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments