BELAGAVIರಾಜಕೀಯರಾಜ್ಯಸುದ್ದಿ

“ಕ್ಷೇತ್ರಕ್ಕೆ ಸರ್ಕಾರವೇ ಬಂದರೂ ಗೆಲ್ಲೋದು ನಾನೇ” – ವೀರಣ್ಣ ಚರಂತಿಮಠ ವಿಶ್ವಾಸ

ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್‌ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಭಾರೀ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. “ರಾಜ್ಯ ಸರ್ಕಾರವೇ ಕ್ಷೇತ್ರಕ್ಕೆ ಬಂದು ಕುಳಿತರೂ, ಗೆಲುವು ಮಾತ್ರ ನನ್ನದೇ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಅಶ್ವವೇಗ ನ್ಯೂಸ್‌ಗೆ ನೀಡಿದ ವಿಶೇಷ ಹೇಳಿಕೆಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಭಿವೃದ್ಧಿ ವಿಚಾರದಲ್ಲಿ ಮತದಾರರು ಬಿಜೆಪಿ ಪರ ನಿಲ್ಲಲಿದ್ದಾರೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಿದರು.

ಬೈಎಲೆಕ್ಷನ್‌ನಲ್ಲಿ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನ ಇಲ್ಲ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹಾಗೂ ಪಕ್ಷದ ನಿಲುವು ಜನರಿಗೆ ಸ್ಪಷ್ಟವಾಗಿದೆ. ಈ ಬಾರಿ ಮತದಾರರು ಅಭಿವೃದ್ಧಿಗೆ ಮನ್ನಣೆ ನೀಡಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ, ಸರ್ಕಾರ ಘೋಷಿಸಿರುವ ಮೆಡಿಕಲ್ ಕಾಲೇಜ್‌ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದ ಅವರು, ಅದನ್ನು “ಗಿಮಿಕ್ ಪಾಲಿಟಿಕ್ಸ್‌” ಎಂದು ವ್ಯಾಖ್ಯಾನಿಸಿದರು. ಕಾಂಗ್ರೆಸ್ ಕೈಗೊಳ್ಳುತ್ತಿರುವ ತಂತ್ರಗಳು ಕೇವಲ ಚುನಾವಣಾ ಲಾಭಕ್ಕಾಗಿ ಮಾತ್ರವಾಗಿವೆ ಎಂದು ಆರೋಪಿಸಿದರು.

ಪಕ್ಷದೊಳಗಿನ ರೆಬೆಲ್ ನಾಯಕರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರನ್ನು ಪಕ್ಷಕ್ಕೆ ಮರಳಿ ಕರೆತರುವ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿರುವುದಾಗಿ ಹೇಳಿದರು.

ಒಟ್ಟಿನಲ್ಲಿ, ಬಾಗಲಕೋಟೆ ಬೈಎಲೆಕ್ಷನ್‌ನಲ್ಲಿ ಬಿಜೆಪಿ ಪರ ಗಾಳಿ ಬೀಸುತ್ತಿದೆ ಎಂದು ವೀರಣ್ಣ ಚರಂತಿಮಠ ವಿಶ್ವಾಸ ವ್ಯಕ್ತಪಡಿಸಿದ್ದು, ಚುನಾವಣೆ ಕಣ ಇನ್ನಷ್ಟು ಕುತೂಹಲಕಾರಿ ಹಂತ ತಲುಪಿದೆ.

Comments (0)

Your email address will not be published. Required fields are marked *

Back to top button