ರಾಜ್ಯಶಿಕ್ಷಣಸುದ್ದಿ

ಶಾಲೆಗಳಲ್ಲಿ ವಂದೇ ಮಾತರಂನ 6 ಚರಣಗಳ ಗಾಯನ ಕಡ್ಡಾಯ


ಬೆಂಗಳೂರು: ಕರ್ನಾಟಕದ ಶಾಲೆಗಳಲ್ಲಿ ‘ವಂದೇ ಮಾತರಂ’ ಗೀತೆಯ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎನ್ನುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್ ವಜಾಗೊಳಿಸಿದೆ. ಈ ಆದೇಶವು ಅಸಂವಿಧಾನಿಕ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಲು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರಿದ್ದ ಪೀಠವು ನಿರಾಕರಿಸಿದೆ. ಇದೇ ರೀತಿಯ ಅರ್ಜಿಯನ್ನು ಈ ಹಿಂದೆ ಸುಪ್ರೀಂ ಕೋರ್ಟ್ ಕೂಡ ವಜಾಗೊಳಿಸಿದ್ದನ್ನು ಉಲ್ಲೇಖಿಸಿದ ಹೈಕೋರ್ಟ್, ಅರ್ಜಿದಾರರ ಮನವಿಯನ್ನು ಪುರಸ್ಕರಿಸಲಿಲ್ಲ.

ಅರ್ಜಿದಾರರು ತಮ್ಮ ವಾದದಲ್ಲಿ, ಹಿಂದೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುತ್ತಿತ್ತು, ಆದರೆ ಹೊಸ ಆದೇಶದಂತೆ ಆರು ಚರಣಗಳನ್ನು ಹಾಡುವುದು ಕಡ್ಡಾಯವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಮೂರನೇ ಚರಣದಿಂದ ಆರನೇ ಚರಣದವರೆಗೆ ಹಿಂದೂ ದೇವತೆಗಳ ಆರಾಧನೆಯ ಅಂಶಗಳಿರುವುದರಿಂದ, ಇದು ಸಂವಿಧಾನದ ವಿಧಿ 14 (ಸಮಾನತೆ), ವಿಧಿ 25 (ಧಾರ್ಮಿಕ ಸ್ವಾತಂತ್ರ್ಯ) ಮತ್ತು ವಿಧಿ 28ಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು. ಆದರೆ ನ್ಯಾಯಾಲಯವು ಈ ವಾದವನ್ನು ಒಪ್ಪದೆ ಅರ್ಜಿಯನ್ನು ವಜಾ ಮಾಡುವ ಮೂಲಕ ಸರ್ಕಾರದ ಆದೇಶಕ್ಕೆ ತಡೆಯೊಡ್ಡಲು ನಿರಾಕರಿಸಿದೆ. ಇದರಿಂದಾಗಿ ಶಾಲೆಗಳಲ್ಲಿ ಆರು ಚರಣಗಳ ವಂದೇ ಮಾತರಂ ಗಾಯನ ಮುಂದುವರಿಯಲಿದೆ.

Comments (0)

Your email address will not be published. Required fields are marked *

Back to top button