ಮಾಜಿ ಸಿಎಂ ಶೆಟ್ಟರ್ ಬಿಜೆಪಿಗೆ ವಾಪಸ್ ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನನಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಗೆ ಬಂದಿದ್ದರು. ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಎಲೆಕ್ಷನ್ ನಲ್ಲಿ ಸೋತರು. ನಂತ್ರ ಅವರನ್ನು ಎಂ ಎಲ್ ಸಿ ಮಾಡಿದ್ದೆವು. ಕಾಂಗ್ರೆಸ್ ಗೆ ದ್ರೋಹ ಮಾಡಲ್ಲ ಅಂತ ಹೇಳಿದ್ರು. ಇದೀಗ ಬಿಜೆಪಿಗೆ ವಾಪಸ್ ಆಗಿದ್ದಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ತೋಡಿಕೊಂಡಿದ್ದಾರೆ.