Wednesday, January 28, 2026
20.3 C
Bengaluru
Google search engine
LIVE
ಮನೆಜಿಲ್ಲೆಮತ್ತೆ ಬಿಜೆಪಿ ಸೇರಿದ್ಯಾಕೆ ಅನ್ನೋ ಪ್ರಶ್ನೆಗೆ ಉತ್ತರ ಕೊಟ್ಟ ಶೆಟ್ಟರ್

ಮತ್ತೆ ಬಿಜೆಪಿ ಸೇರಿದ್ಯಾಕೆ ಅನ್ನೋ ಪ್ರಶ್ನೆಗೆ ಉತ್ತರ ಕೊಟ್ಟ ಶೆಟ್ಟರ್

ನವದೆಹಲಿ: ಮರಳಿ ಬಿಜೆಪಿಗೆ (BJP )  ಬರಬೇಕು ಅನ್ನೋದು ಪಕ್ಷದ ಎಲ್ಲರ ಆಶಯವಾಗಿತ್ತು. ಇಂದು ಬೆಳಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಸೇರಿದಂತೆ ಹಲವು ಹಿರಿಯ ನಾಯಕರನ್ನು ನನ್ನನ್ನು ಪ್ರೀತಿಯಿಂದ ಬರಮಾಡಿಕೊಂಡರು. ಕಾಂಗ್ರೆಸ್ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರಿಗೆ ಕಳುಹಿಸಿದ್ದೇನೆ. ದೇಶದ ರಕ್ಷಣೆ, ದೇಶದ ಒಗ್ಗಡೂವಿಕೆಗಾಗಿ 10 ವರ್ಷದಿಂದ ಪ್ರಧಾನಿಗಳಾದ ಮೋದಿ ಕೆಲಸ ಮಾಡಿದ್ದಾರೆ. ಅವರ ಮರು ಆಯ್ಕೆಯಾಗಬೇಕು. ಈ ಹಿನ್ನೆಲೆ ಕಾಂಗ್ರೆಸ್ ತೊರೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಹೇಳಿದರು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಾನು ಮರಳಿ ಬರಬೇಕು ಅನ್ನೋದು ಅವರ ಆಶಯ ಆಗಿತ್ತು. ಹಾಗಾಗಿ ಬಿಜೆಪಿಗೆ ಮರಳಿ ಬಂದಿದ್ದೇನೆ.

ಅದೇ ರೀತಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಇ-ಮೇಲ್ ಮೂಲಕ ಕಳುಹಿಸಿದ್ದೇನೆ. ನೇರವಾಗಿ ಪತ್ರ ಕಳುಹಿಸಲಾಗುತ್ತದೆ ಎಂದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಾನು ಮರಳಿ ಬರಬೇಕು ಅನ್ನೋದು ಅವರ ಆಶಯ ಆಗಿತ್ತು. ಹಾಗಾಗಿ ಬಿಜೆಪಿಗೆ ಮರಳಿ ಬಂದಿದ್ದೇನೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments