
ವಿಜಯಪುರ : ಪರಿಸರ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿತ್ತು. ಆದ್ರೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಈ ಬಗ್ಗೆ ಟ್ವೀಟರ್ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಹಿತಿ ಹಂಚಿಕೊಂಡಿದ್ದಾರೆ.

ಸಿದ್ದಸಿರಿ ಸಕ್ಕರೆ ಹಾಗೂ ಎಥನಾಲ್ ಕಾರ್ಖಾನೆ ಮುಚ್ಚಲು ಸರ್ಕಾರ ನೋಟಿಸ್ ನೀಡಿತ್ತು. “ಸತ್ಯದ ಗೆಲುವು” victory of truth ಎಂದು ಯತ್ನಾಳ್ ಟ್ವಿಟ್ ಮಾಡಿದ್ದಾರೆ. ಕಾರ್ಖಾನೆ ಮುಚ್ಚುವ ಷಡ್ಯಂತ್ರಕ್ಕೆ ಕೋರ್ಟ್ ತಡೆ ನೀಡಿದೆ ಎಂದು ಬರೆದುಕೊಂಡಿದ್ದಾರೆ.




