ಬಿಗ್ ಬಾಸ್ ಕನ್ನಡ ಸೀಸನ್ 10ರ ರನ್ನರ್ ಅಪ್ ಆಗಿ ಹೊರಬಂದಿರುವ ಡ್ರೋನ್ ಪ್ರತಾಪ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಮಾಜಿ ಸಿಎಂ ಹೆಸರು ಹೇಳಿಕೊಂಡು ಡ್ರೋನ್ ಪ್ರತಾಪ್ ಅವರು ವಂಚನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ದೂರು ದಾಖಲು ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಮಾಡಿದ ಆರೋಪವೊಂದು ಕೇಳಿ ಬರುತ್ತಿದೆ. ಚಂದನ್ ಕುಮಾರ್ಗೌಡ ಎಂಬುವವರಿಂದ ನಗರ ಪೊಲೀಸ್ ಆಯುಕ್ತ ದಯಾನಂದ್ಗೆ ದೂರು ನೀಡಿದ್ದಾರೆ.
2 ಲಕ್ಷ ಹಣ ಪಡೆದು ಪ್ರತಾಪ್ ವಂಚಿಸಿರುವ ಆರೋಪ ಕೇಳಿ ಬಂದಿದೆ. ಮಾಜಿ ಸಿಎಂ ಕುಮಾರಸ್ವಾಮಿ ಪರಿಚಯವಿದೆ ಎಂದು ಹೇಳಿಕೊಂಡು ವಂಚಿಸಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಒಂದು ಬಿಡುಗಡೆಯಾಗಿದೆ. ನಾನು ಆಗಾಗ ಕುಮಾರಸ್ವಾಮಿಯವರ ಫಾರ್ಮಹೌಸ್ಗೆ ಹೋಗಿ ಭೇಟಿಯಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾರೆ ಎನ್ನಲಾಗುತ್ತಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಆರೋಪ ಕೆಳಿ ಬರುತ್ತಿದೆ. ಬಿಗ್ ಬಾಸ್ನಿಂದ ಹೊರಬಂದ ನಂತರ ಕರೆ ಸ್ವೀಕರಿಸದೇ ಹಣ ಹಿಂದಿರುಗಿಸದೆ ವಂಚಿಸುತ್ತಿದ್ದಾರೆ ಎನ್ನಲಾಗುತ್ತಿದೆ.