Tuesday, June 24, 2025
25.1 C
Bengaluru
Google search engine
LIVE
ಮನೆಜಿಲ್ಲೆಮುಸ್ಲಿಮರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಮುಸ್ಲಿಮರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಳಗಾವಿ : ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ಮುಸ್ಲಿಮರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಅವರ ತಮ್ಮ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ವಾಟ್​​ ಇಸ್​ ರಾಂಗ್​ ಇನ್​ ದ್ಯಾಟ್​​. ಮುಸ್ಲಿಮರು ಸೇರಿ ಎಲ್ಲರನೂ ರಕ್ಷಣೆ ಮಾಡುತ್ತೇವೆ ಎಂದು ನಾನು ಹೇಳಿದ್ದು. ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನ ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸ್ಪಷ್ಟನೆ ನೀಡಿದರು.

ಸಿದ್ದು ಹೇಳಿಕೆಗೆ ಬಿಜೆಪಿ ನಾಯಕರ ಕಿಡಿ

ಸೋಮವಾರ (ಡಿಸೆಂಬರ್​ 4) ರಂದು ಮುಖ್ಯಮಂತ್ರಿಗಳು ಆಡಿದ ಮಾತು ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹಿಂದೆ ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಏನಾಯಿತು.? ಹಿಂದೂಗಳನ್ನು ಎರಡನೇ ದರ್ಜೆ ಪ್ರಜೆಗಳ ರೀತಿ ನೋಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ್​ ವಾಗ್ದಾಳಿ ಮಾಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments