ಕ್ರೈಂ ಸ್ಟೋರಿರಾಜ್ಯಸುದ್ದಿ

ಮೋಸ್ಟ್​ ವಾಂಟೆಡ್​ ಭೂಗತ ನಕ್ಸಲ್​ ಸುರೇಶ್​ ಬಂಧನ

ಚಿಕ್ಕಮಗಳೂರು : 20 ವರ್ಷಗಳಿಂದ ಕಣ್ಮರೆಯಾಗಿದ್ದ ಮೂಡಿಗೆರೆ ಅಂಗಡಿ ಗ್ರಾಮದ ನಕ್ಸಲ್​ ಸುರೇಶ್​ನನ್ನು ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅರಣ್ಯದ ನಕ್ಸಲ್​ ಕ್ಯಾಂಪ್​  ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ನಕ್ಸಲ್​ ಸುರೇಶ್​​ ಗಾಯಗೊಂಡಿದ್ದ. ಹೀಗಾಗಿ ಸುರೇಶ್​ಗೆ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈ ವಿಚಾರ ತಿಳಿದು ದಾಳಿ ನಡೆಸಿದ ಪೊಲೀಸರು ಸುರೇಶ್​​​ನನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್​​, ಕಳೆದ 10 ವರ್ಷಗಳಿಂದ ಭೂಗತ ನಕ್ಸಲ್​ ಆಗಿದ್ದಾನೆ. ಪೊಲೀಸ್​​ ಇಲಾಕಡ, ಸುರೇಶ್​ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಕೇರಳ ಕರ್ನಾಟಕ ಗಡಿ ಪ್ರದೇಶದ ಅರಣ್ಯದಲ್ಲಿ ಸುರೇಶ್​  ಅಡಗಿದ್ದ. ಸುರೇಶ್​​ ವಿರುದ್ಧ ಚಿಕ್ಕಮಗಳೂರು ಉಡುಪಿಯ ಶಿವಮೊಗ್ಗ ಜಿಲ್ಲೆಯಲ್ಲಿ ಕೇಸ್​​ ದಾಖಲಾಗಿವೆ. 10 ಕ್ಕೂ ಅಧಿಕ ಪ್ರಕರಣಗಳಲ್ಲಿ ಸುರೇಶ್​​ ಪೊಲೀಸರಿಗೆ ಬೇಕಾಗಿರುವ ಆರೋಪಿಯಾಗಿದ್ದಾನೆ. ಸರ್ಕಾರ ಸುರೇಶ್​ನನ್ನು ಹಿಡಿದು ಕೊಟ್ಟವರಿಗೆ  5 ಲಕ್ಷ ಬಹುಮಾನ ಸಹ ಘೋಷಿಸಿತ್ತು.  ಕೇರಳದ ಕಾನನದಲ್ಲಿ ಓಡಾಡಿಕೊಂಡಿದ್ದ ಇವನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದ ಸುರೇಶ್​​ ಅಲಿಯಾಸ್​​ ಮಹದೇವನನ್ನು ಚಿಕಿತ್ಸೆ ಕೊಡಿಸಿ ನಂತರ ಇವನ ಬಗ್ಗೆ ವಿಚಾರಣೆ ನಡೆದ ವೇಳೆ ಈತ ನಕ್ಸಲ್​ ಎಂಬುದು ತಿಳಿದು ಬಂದಿದೆ.

https://www.youtube.com/watch?v=vA1JM8Z4mP0

Comments (0)

Your email address will not be published. Required fields are marked *

Back to top button