Tuesday, June 24, 2025
26.6 C
Bengaluru
Google search engine
LIVE
ಮನೆಜಿಲ್ಲೆಸುಮಲತಾ ಟಿಕೆಟ್ ವಿವಾದ ಬಗೆಹರಿಯಲಿದೆ: ಸಚಿವ ಜೋಶಿ ವಿಶ್ವಾಸ

ಸುಮಲತಾ ಟಿಕೆಟ್ ವಿವಾದ ಬಗೆಹರಿಯಲಿದೆ: ಸಚಿವ ಜೋಶಿ ವಿಶ್ವಾಸ

ಮಂಡ್ಯ ಲೋಕಸಭೆ ಟಿಕೆಟ್ ಹಂಚಿಕೆ ವಿವಾದ ಪರಿಹಾರ ಕಾಣಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿಯಿಂದ ಏನೂ ಸಮಸ್ಯೆಯಿಲ್ಲ. ಅಂತೆಯೇ ಜೆಡಿಎಸ್ ನಿಂದಲೂ ಅಂಥ ಸಮಸ್ಯೆಯಿಲ್ಲ. ಪಕ್ಷದ ರಾಷ್ಟ್ರೀಯ ನಾಯಕರು ಬಗೆಹರಿಸಲಿದ್ದಾರೆ ಎಂದು ತಿಳಿಸಿದರು.

ಒಂದು ಮನೆಯಲ್ಲೇ ಕೆಲವೊಮ್ಮೆ ಹೊಂದಾಣಿಕೆ ಕಷ್ಟವಾಗಿರುತ್ತದೆ. ಹಾಗಿರುವಾಗ ದೊಡ್ಡ ಪಕ್ಷ, ಲಕ್ಷಾಂತರ ಮುಖಂಡರು, ಕಾರ್ಯಕರ್ತರು ಇರುವಾಗ ಸಮಸ್ಯೆ ಸಹಜ. ಆದರೆ, ಅದೆಲ್ಲ ಬಗೆಹರಿಯುತ್ತದೆ ಎಂದು ಹೇಳಿದರು. ಮಂಡ್ಯ ಸಂಸದೆ ಸುಮಲತಾ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರಿಬ್ಬರ ಸಹಕಾರದಿಂದ ಟಿಕೆಟ್ ಹಂಚಿಕೆ ವಿವಾದ ಅಂತ್ಯ ಕಾಣಲಿದೆ ಎಂದು ಜೋಶಿ ವಿಶ್ವಾಸ ವ್ಯಕ್ತಡಿಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments