Wednesday, June 25, 2025
27.1 C
Bengaluru
Google search engine
LIVE
ಮನೆರಾಜ್ಯನಾಗಮಲೆಗೆ ಹೋಗಲು ಕಾಲ್ನಡಿಗೆಗೆ ಅವಕಾಶ : ಅರಣ್ಯ ಇಲಾಖೆಯ ಆದೇಶ

ನಾಗಮಲೆಗೆ ಹೋಗಲು ಕಾಲ್ನಡಿಗೆಗೆ ಅವಕಾಶ : ಅರಣ್ಯ ಇಲಾಖೆಯ ಆದೇಶ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ನಾಗಮಲೈಗೆ ತೆರಳುವ ಭಕ್ತಾದಿಗಳಿಗೆ ಕಾಲ್ನಡಿಗೆಯಲ್ಲಿ ಹೋಗಲು ಮಾತ್ರ ಅರಣ್ಯ ಇಲಾಖೆ ಅವಕಾಶ ಕಲ್ಪಿಸಲಾಗಿದೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿರುವ ನಾಗಮಲೆ ಪುಣ್ಯಕ್ಷೇತ್ರಕ್ಕೆ ಹೋಗಲು ಮಾರ್ಚ್ 3 ರಿಂದ ಮಾರ್ಚ್ 10 ರವರೆಗೆ ಮಾತ್ರ ಅರಣ್ಯ ಇಲಾಖೆ ಅವಕಾಶ ಕಲ್ಪಿಸಿದೆ.

ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರ ಅನುಮತಿ ಇಲ್ಲದೆ ರಾಜ್ಯಾದ್ಯಂತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಮಾಡುವುದನ್ನು ನಿಷೇಧಿಸಿತ್ತು. ಈ ಹಿಂದೆ ಹೊರಡಿಸಿದ್ದ ಆದೇಶದಂತೆ ಮಲೈ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿಯೂ ಸಹ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.

ಮಲೈ ಮಹದೇಶ್ವರಬೆಟ್ಟ ವನ್ಯಜೀವಿ ವಲಯದಿಂದ ನಾಗಮಲೆಗೆ ತೆರಳಲು ಆನ್‌ಲೈನ್ ಮೂಲಕ ನೋಂದಾಯಿಸಿ ನಂತರ ನಾಗಮಲೆಗೆ ತೆರಳಬೇಕಾಗಿರುತ್ತದೆ. ಈ ಸಂಬಂಧ ಆನ್‌ಲೈನ್ ಮೂಲಕ ನೋಂದಾಯಿಸಲು ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಮಾರ್ಚ್ 8ರಂದು ಮಲೈ ಮಹದೇಶ್ವರಬೆಟ್ಟದಲ್ಲಿ ಮಹಾ ಶಿವರಾತ್ರಿ ಮಹೋತ್ಸವದ ವಿಶೇಷ ಇರುವುದರಿಂದ ಭಕ್ತಾದಿಗಳಿಗೆ ತೊಂದರೆಯಾಗುವ ಸಾಧ್ಯತೆ ಇದ್ದು, ಇದನ್ನು ತಪ್ಪಿಸಲು ಮೇಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಅವರು ನೀಡಿರುವ ನಿರ್ದೇಶನದಂತೆ ನಾಗಮಲೈಗೆ ತೆರಳುವ ಭಕ್ತಾದಿಗಳಿಗೆ ಮಾರ್ಚ್ 3 ರಿಂದ 10 ರವರೆಗೆ ಬೆಳಿಗ್ಗೆ 06.30 ರಿಂದ ಬೆಳಿಗ್ಗೆ 10.30 ಗಂಟೆಯೊಳಗೆ ನಾಗಮಲೆಗೆ ಕಾಲ್ನಡಿಗೆಯಲ್ಲಿ ಹೋಗಲು ಅವಕಾಶ ಕಲ್ಪಿಸಲಾಗಿರುತ್ತದೆ.

ನಾಗಮಲೆಯಿಂದ ಹಿಂತಿರುಗಿ ಬರುವ ಭಕ್ತಾದಿಗಳು ಸಂಜೆ 05.30 ಗಂಟೆಯೊಳಗೆ ಕಡ್ಡಾಯವಾಗಿ ಮರಳಿ ಮಹದೇಶ್ವರ ಬೆಟ್ಟಕ್ಕೆ ವಾಪಾಸಾಗಬೇಕಿದೆ. ಅಲ್ಲದೆ ಯಾವುದೇ ರೀತಿಯ ವಾಹನಗಳಲ್ಲಿ ತೆರಳವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಮಹದೇಶ್ವರ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶವು ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಿರುವುದರಿಂದ ನಾಗಮಲೆಗೆ ಹೋಗುವ ಸಂದರ್ಭದಲ್ಲಿ ಯಾವುದೇ ಪ್ಲಾಸ್ಟಿಕ್ ವಸ್ತುಗಳನ್ನು ಅರಣ್ಯದೊಳಗೆ ತೆಗೆದುಕೊಂಡು ಹೋಗುವುದಕ್ಕೆ ನಿಷೇಧಿ ಹೇರಲಾಗಿದೆ. ತಪ್ಪಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಲೆ ಮಹದೇಶ್ವರ ವನ್ಯಜೀವಿ ಧಾಮದ ಡಿಸಿಎಫ್ ಡಾ. ಸಂತೋಷ್ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments