Thursday, January 29, 2026
26.8 C
Bengaluru
Google search engine
LIVE
ಮನೆರಾಜ್ಯಲಕ್ಕುಂಡಿಯಲ್ಲಿ ಉತ್ಖನನ ವೇಳೆ 3 ಹೆಡೆಯ ನಾಗರ ಕಲ್ಲು ಪತ್ತೆ

ಲಕ್ಕುಂಡಿಯಲ್ಲಿ ಉತ್ಖನನ ವೇಳೆ 3 ಹೆಡೆಯ ನಾಗರ ಕಲ್ಲು ಪತ್ತೆ

ಗದಗ : ಐತಿಹಾಸಿಕ ಲಕ್ಕುಂಡಿಯಲ್ಲಿ 12ನೇ ದಿನವೂ ಉತ್ಖನನ ಕಾರ್ಯ ಮುಂದುವರೆದಿದ್ದು, ಪ್ರತಿದಿನವೂ ಹೊಸ ಹೊಸ ಪ್ರಾಚ್ಯಾವಶೇಷಗಳು ಪತ್ತೆಯಾಗುತ್ತಿವೆ.

ಇತ್ತೀಚೆಗೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಉತ್ಖನನದ ವೇಳೆ ಅಪರೂಪದ 3 ಹೆಡೆಯ ನಾಗರ ಕಲ್ಲು ಪತ್ತೆಯಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.ಈ 12 ದಿನಗಳ ಉತ್ಖನನದಲ್ಲಿ ಒಂದಲ್ಲಾ ಒಂದು ಮಹತ್ವದ ಪುರಾತತ್ವ ಅವಶೇಷಗಳು ಬೆಳಕಿಗೆ ಬರುತ್ತಿದ್ದು, ಲಕ್ಕುಂಡಿಯ ಐತಿಹಾಸಿಕ ಮಹತ್ವ ಮತ್ತಷ್ಟು ಎತ್ತಿ ತೋರಿಸುತ್ತಿದೆ. ಇದೀಗ ಪತ್ತೆಯಾಗಿರುವ 3 ಹೆಡೆಯ ನಾಗರ ಮೂರ್ತಿ ಸ್ಥಳೀಯರ ಗಮನ ಸೆಳೆಯುವುದರ ಜೊತೆಗೆ, ಹಲವಾರು ಚರ್ಚೆಗಳಿಗೆ ಕಾರಣವಾಗಿದೆ.

ಸ್ಥಳೀಯರ ಪ್ರಕಾರ, ನಿಧಿ ಇರುವ ಸ್ಥಳದಲ್ಲಿ ನಾಗರಹಾವು ಇರುತ್ತದೆ ಎಂಬ ನಂಬಿಕೆ ಇದೆ. ಅದೇ ಕಾರಣಕ್ಕೆ ಇಲ್ಲಿ ನಾಗರ ಕಲ್ಲು ಸಿಕ್ಕಿದೆ ಎಂಬ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸಿದ್ದಾರೆ. ಈ ಪತ್ತೆ ಲಕ್ಕುಂಡಿಯಲ್ಲಿ ಯಾವುದೇ ನಿಧಿ ಅಥವಾ ವಿಶೇಷ ಮಹತ್ವದ ಸ್ಥಳ ಇರಬಹುದೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರವಾಸಿ ಮಿತ್ರ ಆಲಪ್ಪ ತುಳಿಸಿಮನಿ ಮಾತನಾಡಿ , ನಾಗರ ಸರ್ಪಗಳಲ್ಲಿ ಮೂರು ಹೆಡೆ, ಪಂಚಮುಖಿ ಹಾಗೂ ಸಪ್ತಮುಖಿ ನಾಗರಗಳ ಉಲ್ಲೇಖಗಳು ಪುರಾಣಗಳಲ್ಲಿ ಕಂಡುಬರುತ್ತವೆ ಇಂತಹ ನಾಗರ ಮೂರ್ತಿಗಳು ನಿಧಿ ಇರುವ ಸ್ಥಳವನ್ನು ಸೂಚಿಸುತ್ತವೆ ಎಂಬ ನಂಬಿಕೆ ಇರುವುದಾಗಿ ತಿಳಿಸಿದ್ದಾರೆ.

ಲಕ್ಕುಂಡಿಯಲ್ಲಿ ಪತ್ತೆಯಾಗಿರುವ ಈ 3 ಹೆಡೆಯ ನಾಗರ ಕಲ್ಲು, ಇಲ್ಲಿ ಲಕ್ಷ್ಮೀ ವಾಸಸ್ಥಾನ ಅಥವಾ ಸಂಪತ್ತಿನ ಸಂಕೇತ ಇರಬಹುದೆಂಬ ಸೂಚನೆಯಾಗಿರಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಮುಂದಿನ ಉತ್ಖನನದಲ್ಲಿ ಇನ್ನಷ್ಟು ಮಹತ್ವದ ಪುರಾತತ್ವ ಸಿಕ್ಕಿಬೀಳುವ ನಿರೀಕ್ಷೆ ವ್ಯಕ್ತವಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments