Thursday, November 20, 2025
22.5 C
Bengaluru
Google search engine
LIVE
ಮನೆ#Exclusive NewsTop Newsತಪ್ಪಿದ ಭಾರಿ ಅನಾಹುತ: ಪೆಟ್ರೋಲ್ ಕೊಡಲಿಲ್ಲ ಎಂದು ಬಂಕ್ ಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ತಪ್ಪಿದ ಭಾರಿ ಅನಾಹುತ: ಪೆಟ್ರೋಲ್ ಕೊಡಲಿಲ್ಲ ಎಂದು ಬಂಕ್ ಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಮಧ್ಯಪ್ರದೇಶ: ಹೆಲ್ಮೆಟ್​ ಧರಿಸದೇ ಬಂದು ಪೆಟ್ರೋಲ್​ ಕೇಳಿದ ಯುವಕರಿಗೆ ಪ್ರೆಟ್ರೋಲ್​ ನೀಡಲು ಸಿಬ್ಬಂದಿ ನಿರಾಕರಿಸಿದ್ದಕ್ಕೆ ಬಂಕ್​ಗೆ ಬೆಂಕಿ ಇಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.

ಛೋಟಾ ಬಂಗಾರ್ಡಾದ ಶುಕ್ಲಾ ಬ್ರದರ್ಸ್​ ಪೆಟ್ರೋಲ್​​ ಪಂಪ್​ನಲ್ಲಿ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ.

ಮಧ್ಯ ಪ್ರದೇಶದಲ್ಲಿ ಸಂಚಾರಿ ನಿಯಮಗಳನ್ನು ಕಠಿಣಗೊಳಿಸಿದ್ದು, ಪೆಟ್ರೋಲ್ ಬಂಕ್​ಗಳಲ್ಲಿ ಹೆಲ್ಮೆಟ್ ಇಲ್ಲದ ದ್ವಿಚಕ್ರವಾಹನಗಳಿಗೆ ಪೆಟ್ರೋಲ್ ಹಾಕದಂತೆ ಸೂಚನೆ ನೀಡಲಾಗಿದೆ. ಅಂತೆಯೇ ಇಂದೋರ್ ನಲ್ಲಿ ಹೆಲ್ಮೆಟ್ ಧರಿಸದೇ ಬಂದ ಮೂವರು ಯುವಕರ ತಂಡ ಪೆಟ್ರೋಲ್ ಕೇಳಿದ್ದು, ಈ ವೇಳೆ ಬಂಕ್ ಸಿಬ್ಬಂದಿ ಪೆಟ್ರೋಲ್ ಹಾಕುವುದನ್ನು ನಿರಾಕರಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ದುಷ್ಕರ್ಮಿಗಳ ತಂಡ ಪೆಟ್ರೋಲ್ ಬಂಕ್ ಗೆ ಬೆಂಕಿ ಹಾಕಿರುವ ಘಟನೆ ನಡೆದಿದೆ.

ಇಬ್ಬರು ಯುವಕರು ಬೈಕ್​ ನಿಲ್ಲಿಸುತ್ತಿದ್ದಂತೆ ವಾಗ್ದಾದಕ್ಕೆ ಇಳಿದಿದ್ದಾರೆ. ಬಳಿಕ ಅವರಲ್ಲಿ ಓರ್ವ ಚಾಕು ಹೊರ ತೆಗೆದು ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ. ಇನ್ನೋರ್ವ ಬೆಂಕಿ ಹಚ್ಚಿದ್ದಾನೆ. ಇನ್ನು ಘಟನೆ ಸಂಬಂಧ ಡಿಸಿಪಿ ರಾಜೇಶ್​ ದಂಡೋಟಿಯಾ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments