Wednesday, April 30, 2025
24 C
Bengaluru
LIVE
ಮನೆಜಿಲ್ಲೆಬಸ್​ ಪ್ರಯಾಣದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಬಸ್​ ಪ್ರಯಾಣದ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ.

ಕಲಬುರಗಿ: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣ ಮಾಡುವಾಗ ಜೆಸ್ಕಾಂ ಬಿಲ್​ ಕಲೆಕ್ಟರ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಜಯ್​ ಕುಮಾರ್​ ನಾಗನಹಳ್ಳಿ (45) ಮೃತ ದುರ್ದೈವಿ. ಕಲಬುರಗಿಯ ಬಿದ್ದಾಪುರ ಕಾಲೋನಿ ನಿವಾಸಿ.  ಕಲಬುರಗಿಯಿಂದ ಭಾಲ್ಕಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಇವರಿಗೆ ಕಮಲಾಪುರ ಸಮೀಪದಲ್ಲಿ ಹೃದಯಾಘಾತ ಸಂಭವಿಸಿದೆ.  ಕಮಲಾಪುರ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments