Top Newsಜಿಲ್ಲೆ

ಕಾಡಾನೆಯೆದು ಸೆಲ್ಫಿ ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ 25 ಸಾವಿರ ದಂಡ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಭಾನುವಾರ ಕಾಡಾನೆಯೆದುರು ಸೆಲ್ಫಿ ಫೋಟೋ ತೆಗೆದು,ವಿಡಿಯೋ ಮಾಡುತ್ತಿದ್ದ ವೇಳೆ ಆನೆ ದಾಳಿಗೆ ಒಳಗಾದ ವ್ಯಕ್ತಿಯನ್ನು ಗುರುತಿಸಿ ಅರಣ್ಯ ಇಲಾಖೆ ದಂಡ ವಿಧಿಸಿದೆ.

ನಂಜನಗೂಡಿನ ನಿವಾಸಿ ಆರ್​. ಬಸವರಾಜು ಕಾಡಾನೆ ದಾಳಿಗೊಳಗಾಗಿ ಅದೃಷ್ಟವಶಾತ್​ ಪಾರಾಗಿದ್ದ. ಇತನನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆ ಸಿಬ್ಬಂದಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಮಾಹಿತಿ ಕೊರತೆಯಿಂದ ಉದ್ಧಟತನ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಆತನ ಬಳಿಯಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಪೊಲೀಸರು 25 ಸಾವಿರ ದಂಡ ವಿಧಿಸಿದ್ದಾರೆ.

Comments (0)

Your email address will not be published. Required fields are marked *

Back to top button