Thursday, December 11, 2025
25.7 C
Bengaluru
Google search engine
LIVE
ಮನೆದೇಶ/ವಿದೇಶಪ್ರೀತಿಯ ವಿಚಾರಕ್ಕೆ ಯುವಕನಿಗೆ ಬ್ಯಾಟ್​ನಿಂದ ಹೊಡೆದು ಯುವತಿ ಕುಟುಂಬಸ್ಥರಿಂದ ಕೊಲೆ!

ಪ್ರೀತಿಯ ವಿಚಾರಕ್ಕೆ ಯುವಕನಿಗೆ ಬ್ಯಾಟ್​ನಿಂದ ಹೊಡೆದು ಯುವತಿ ಕುಟುಂಬಸ್ಥರಿಂದ ಕೊಲೆ!

ಪ್ರೀತಿಯ ವಿಚಾರಕ್ಕೆ ಯುವಕನನ್ನು ಬ್ಯಾಟ್​ನಿಂದ ಥಳಿಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ..

ಜ್ಯೋತಿ ಶ್ರವಣ್​​ ಸಾಯಿ ಮೃತ ಯುವಕ.. ಶ್ರಮಣ್​ ಮೈಸಮ್ಮ ಗುಡ್ಡದಲ್ಲಿರುವ ಸೆಂಟ್​​​​ ಪೀಟರ್ಸ್​​​​​​ ಎಂಜಿನಿಯರ್​​​ ಕಾಲೇಜಿನಲ್ಲಿ ಕಂಪ್ಯೂಟರ್​​​​ ಸೈನ್ಸ್​​​​ ಅಂಡ್​ ಎಂಜಿನಿಯರಿಂಗ್​​​​​​​​​​​ ಓದುತ್ತಿದ್ದ. ಮಗಳನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಪೋಷಕರು, ಮದುವೆ ಮಾತುಕತೆಗೆಂದು ಮನೆಗೆ ಕರೆದು
ವಿದ್ಯಾರ್ಥಿಯನ್ನು ಬ್ಯಾಟ್​ನಿಂದ ಥಳಿಸಿ ಕೊಲೆ ಮಾಡಿದ್ದಾರೆ..

ವಿದ್ಯಾರ್ಥಿಯ ಸಾವಿಗೆ ಕಾರಣವಾದ ಹಿಂಸಾತ್ಮಕ ದಾಳಿಗೂ ಮುನ್ನ ಯುವತಿಯ ಕುಟುಂಬ ಹಲವಾರು ಬಾರಿ ಎಚ್ಚರಿಕೆ ನೀಡಿತ್ತು, ಈ ಸಂಬಂಧಕ್ಕೆ ಅವರ ವಿರೋಧವಿತ್ತು. ಈ ಬಗ್ಗೆ ಮಾಹಿತಿ ನೀಡಿದ ಅಮೀನ್‌ಪುರ ಸರ್ಕಲ್ ಇನ್ಸ್‌ಪೆಕ್ಟರ್ ನರೇಶ್ ನೀಡಿರುವ ಮಾಹಿತಿಯ ಪ್ರಕಾರ, ಶ್ರವಣ್ ಬೀರಮ್‌ಗುಡದ ಇಸುಕಬಾವಿ ನಿವಾಸಿ 19 ವರ್ಷದ ಶ್ರೀಜಾ ಜೊತೆ ಸಂಬಂಧ ಹೊಂದಿದ್ದ. ಅವರ ಸಂಬಂಧಕ್ಕೆ ಶ್ರೀಜಾ ಅವರ ಕುಟುಂಬದಿಂದ ವಿರೋಧವಿತ್ತು. ಈ ಹಿಂದೆ ಅವರು ಹುಡುಗನಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರು. ಆದರೆ ಪ್ರೇಮಿಗಳು ತಮ್ಮ ಪ್ರೀತಿಯ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ.

ಹೀಗಾಗಿ ಶ್ರೀಜಾಳ ಪೋಷಕರು ಶ್ರವಣ್​ನನ್ನು ಮದುವೆಯ ಬಗ್ಗೆ ಚರ್ಚಿಸಬೇಕು ಬಾ ಎಂದು ಮನೆಗೆ ಕರೆಸಿಕೊಂಡು, ಶ್ರವಣ್ ಮೇಲೆ ಹಠಾತ್ತನೆ ಹಲ್ಲೆ ನಡೆಸಿ ಕ್ರಿಕೆಟ್ ಬ್ಯಾಟ್‌ನಿಂದ ತೀವ್ರವಾಗಿ ಹೊಡೆದಿದ್ದಾರೆ. ಆತನ ತಲೆಗೆ ಗಾಯಗಳಾಗಿದ್ದು, ಕಾಲು ಮತ್ತು ಪಕ್ಕೆಲುಬುಗಳಿಗೆ ಮುರಿತಗಳಾಗಿತ್ತು. ನಂತರ ಅವನನ್ನು ಕುಕತ್ಪಲ್ಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದ. ಅಮೀನ್‌ಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ಹಿಂದಿನ ನಿಖರವಾದ ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments