Tuesday, June 24, 2025
25.9 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಯುಗಾದಿಗೆಂದು ಊರಿಗೆ ಹೋಗುವಾಗ ಅ್ಯಕ್ಸಿಡೆಂಟ್​; ಸ್ಥಳದಲ್ಲೇ ಇಬ್ಬರು ಸಾವು

ಯುಗಾದಿಗೆಂದು ಊರಿಗೆ ಹೋಗುವಾಗ ಅ್ಯಕ್ಸಿಡೆಂಟ್​; ಸ್ಥಳದಲ್ಲೇ ಇಬ್ಬರು ಸಾವು

ದಾವಣಗೆರೆ: ಯುಗಾದಿ ಹಬ್ಬಕ್ಕೆಂದು ಊರಿಗೆ ಹೋಗುವಾಗ ಚನ್ನಗಿರಿ ತಾಲೂಕಿನ ಬೀರೂರು ಹಾಗೂ ಸಮ್ಮಸಗಿ ರಾಜ್ಯ ಹೆದ್ದಾರೆಯ ಗುಳ್ಳೇಗಳ್ಳಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ.

ಅರ್ಜುನ್ ನಾಯ್ಕ (25), ಹರೀಶ್ ನಾಯ್ಕ (31) ಮೃತ ಯುವಕರು. ಅಪರಿಚಿತ ವಾಹನ ಡಿಕ್ಕಿಯಿಂದ ಮೃತ ಯುವಕರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೆಂಡಿಗೆರೆ ಸಣ್ಣ ತಾಂಡಾ ಮತ್ತು ಹೊಸಹಟ್ಟಿ ತಾಂಡಾದ ನಿವಾಸಿಗಳೆಂದು ಗುರುತಿಸಲಾಗಿದೆ.

ಮೃತ ಇಬ್ಬರು ಯುವಕರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಯುಗಾದಿ ಹಬ್ಬ ಇರುವ ಕಾರಣ ತಮ್ಮ ದ್ವಿಚಕ್ರ ವಾಹನದಲ್ಲಿ ಯುವಕರು ಊರಿಗೆ ಮರಳುವ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments