ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಹೊಸ ಚಿತ್ರ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅಭಿಮಾನಿಗಳ ಪ್ರೀತಿಯ ಡಿಬಾಸ್, ದಾಸ ದರ್ಶನ್ ಅವರು ತಮ್ಮ ಪತ್ನಿ ವಿಜಯಲಕ್ಷ್ಮೀ ಅವರ ಜೊತೆಗೆ ಭರತನಾಟ್ಯ ವೀಕ್ಷಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಅವರ ಜೊತೆ ನಟ ದರ್ಶನ್ ಅವರು ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ದರ್ಶನ್ ನಟಿಸಿರುವ ಕ್ರಾಂತಿ ಸಿನಿಮಾದ ನಿರ್ಮಾಪಕರಾದ ಬಿ ಸುರೇಶ್ ಮತ್ತು ಶೈಲಜಾ ನಾಗ್ ದಂಪತಿಯ ಮಗಳು ಚಂದನ ಎಸ್ ನಾಗ್ ನಿನ್ನೆ ಭರತನಾಟ್ಯ ರಂಗಪ್ರವೇಶ ಮಾಡಿದ್ದಾರೆ. ಬೆಂಗಳೂರಿನ ಜೆ ಸಿ ರಸ್ತೆಯಲ್ಲಿರುವ ಬಿಡಿಎ ರಂಗಮಂದಿರದಲ್ಲಿ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭರತನಾಟ್ಯ ರಂಗಪ್ರವೇಶಕ್ಕೆ ಸಾಕ್ಷಿಯಾಗುವ ಮೂಲಕ ಚಂದನ ಎಸ್ ನಾಗ್ ಅವರಿಗೆ ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ಶುಭಹಾರೈಸಿದರು. ಇನ್ನು ರಾಜಸ್ಥಾನದಲ್ಲಿ ನಟ ದರ್ಶನ್ ಅವರ ಡೆವಿಲ್ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಹೈದ್ರಾಬಾದ್ನಲ್ಲಿ ಚಿತ್ರದ ಮುಂದಿನ ಚಿತ್ರೀಕರಣ ನಡೆಯಲಿದೆ.