#Exclusive NewsTop Newsಮನರಂಜನೆರಾಜ್ಯಸಿನಿಮಾಸುದ್ದಿ

ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದ ನಟ ದರ್ಶನ್​..!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು.ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಜಾಮೀನು ದೊರೆತ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಟ್ಟಿಗೆ ವಕೀಲರು ಸಹ ಇದ್ದರು. ದರ್ಶನ್, ನ್ಯಾಯಾಲಯದ ಬಳಿ ಬಂದಾಗ ಜನ ಮತ್ತು ಮಾಧ್ಯಮಗಳು ಸುತ್ತುವರೆದರು. ದರ್ಶನ್ ಇಂದು ಕುಟುಂತ್ತ ನಡೆಯಲಿಲ್ಲ, ಬದಲಿಗೆ ಆರಾಮವಾಗಿಯೇ ನಡೆಯುತ್ತಾ ನ್ಯಾಯಾಲಯ ಸಂಕೀರ್ಣದ ಒಳಗೆ ಹೋದರು. ರೇಣುಕಾ ಸ್ವಾಮಿ ಪ್ರಕರಣದಲ್ಲಿ ಬಂಧನವಾದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ಮುಖಾ-ಮುಖಿ ಆಗುತ್ತಿದ್ದಾರೆ. ಒಂದೇ ನ್ಯಾಯಾಲಯದ ಹಾಲ್​ನಲ್ಲಿ ಎಲ್ಲ ಆರೋಪಿಗಳು ನ್ಯಾಯಾಧೀಶರ ಮುಂದೆ ನಿಂತು ಹಾಜರಿ ನೀಡಲಿದ್ದಾರೆ.

Comments (0)

Your email address will not be published. Required fields are marked *

Back to top button