Wednesday, January 28, 2026
20.3 C
Bengaluru
Google search engine
LIVE
ಮನೆ#Exclusive Newsನಟ ದರ್ಶನ್​, ಪವಿತ್ರಾ ಸೇರಿ 7 ಮಂದಿಗೆ ಸಂಕಷ್ಟ; ರದ್ದಾಗುತ್ತಾ ಜಾಮೀನು

ನಟ ದರ್ಶನ್​, ಪವಿತ್ರಾ ಸೇರಿ 7 ಮಂದಿಗೆ ಸಂಕಷ್ಟ; ರದ್ದಾಗುತ್ತಾ ಜಾಮೀನು

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಅವರು ಪೂರ್ಣ ಪ್ರಮಾಣದ ಜಾಮೀನು ಪಡೆದು ಕೋರ್ಟ್​ನಿಂದ ಹೊರ ಬಂದಿದ್ದಾರೆ. ಅವರ ಜೊತೆ ಆಪ್ತೆ ಪವಿತ್ರಾ ಗೌಡ, ಮ್ಯಾನೇಜರ್ ನಾಗರಾಜು ಸೇರಿ ಅನೇಕರಿಗೆ ಜಾಮೀನು ಸಿಕ್ಕಿದೆ. ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಲು ಬೆಂಗಳೂರು ಪೊಲೀಸರು ರೆಡಿ ಆಗಿದ್ದಾರೆ. ಇವರಿಗೆ ಗೃಹ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರಿಂದ ದರ್ಶನ್​ಗೆ ಸಂಕಷ್ಟ ಎದುರಾಗಿದೆ.

ಈಗಾಗಲೇ ಗೃಹ ಇಲಾಖೆಯಿಂದ ಅನುಮತಿ ನೀಡಿ ಕಡತ ರವಾನೆ ಆಗಿದೆ. ಶೀಘ್ರದಲ್ಲೇ ಸುಪ್ರೀಂಕೋರ್ಟ್​ಗೆ ಪೊಲೀಸರು ಮೇಲ್ಮನವಿ ಸಲ್ಲಿಸಲಿದ್ದಾರೆ. ಮೆರಿಟ್ಸ್ ಆಫ್ ದಿ ಕೇಸ್ ಮೇಲೆ ಮನವಿ ಮಾಡಲು ಪೊಲೀಸರು ರೆಡಿ ಆಗಿದ್ದಾರೆ. ಕೇವಲ ದರ್ಶನ್ ಮಾತ್ರವಲ್ಲದೆ, ಬೇಲ್ ಪಡೆದ ಎಲ್ಲರ ಜಾಮೀನು ರದ್ದು ಮಾಡಲು ಮನವಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಕೇಸ್ ಫೈಲ್ ಹಾಗೂ ಚಾರ್ಜ್​ಶೀಟ್​ನ​ ಇಂಗ್ಲಿಷ್​​ಗೆ ತರ್ಜುಮೆ ಮಾಡಲಾಗಿದೆ.

ವಕೀಲರು ಯಾರು?

ಈ ಮೊದಲು ಹೈಕೋರ್ಟ್​ನಲ್ಲಿ ಸರ್ಕಾರಿ ಪರ ವಕೀಲರಾಗಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದ್ದರು. ಅದೇ ರೀತಿ ಸುಪ್ರೀಂ ಕೋರ್ಟ್​ಗೆ ವಕೀಲರಾಗಿ ಅನಿಲ್ ಸಿ. ನಿಶಾನಿ ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಯಾರ ವಿರುದ್ಧ?

ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ, ಪ್ರದೋಶ್, ನಾಗರಾಜು, ಅನುಕುಮಾರ್, ಜಗದೀಶ್​ಗೆ ಹೈಕೋರ್ಟ್​ಜಾಮೀನು ನೀಡಿತ್ತು. ಇದನ್ನು ಬೆಂಗಳೂರು ಪೊಲೀಸರು ಪ್ರಶ್ನೆ ಮಾಡಲಿದ್ದಾರೆ. ಮುಂದಿನ ದಿನಗಳಲ್ಲಿ ದರ್ಶನ್ ಪ್ರಕರಣ ಸುಪ್ರೀಂ ಕೋರ್ಟ್​​ನಲ್ಲಿ ವಿಚಾರಣೆಗೆ ಒಳಪಡಲಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments