Wednesday, June 25, 2025
26.8 C
Bengaluru
Google search engine
LIVE
ಮನೆ#Exclusive Newsನಟ ದರ್ಶನ್​ಗೆ ಇಂದು ಸಿಗಲಿದೆಯಾ ಬಿಗ್ ರಿಲೀಫ್​ !​

ನಟ ದರ್ಶನ್​ಗೆ ಇಂದು ಸಿಗಲಿದೆಯಾ ಬಿಗ್ ರಿಲೀಫ್​ !​

ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ, ಪೊಲೀಸರ ಪರ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ವಾದ ಮಾಡಿದರು. ಸಿವಿ ನಾಗೇಶ್ ಅವರು ದರ್ಶನ್​ಗೆ ಇರುವ ಬೆನ್ನು ನೋವು ಹಾಗೂ ಅದರ ತೀವ್ರತೆಯನ್ನು ಕೋರ್ಟ್​ಗೆ ಮನವರಿಕೆ ಮಾಡಿದರು. ‘ಬೆನ್ನು ನೋವಿಗೆ ಸಾಮಾನ್ಯ ಚಿಕಿತ್ಸೆ ಸಾಕಾಗುವುದಿಲ್ಲ ಮತ್ತು ಅವರು ಶಸ್ತ್ರಚಿಕಿತ್ಸೆಯನ್ನೇ ಮಾಡಿಸಿಕೊಳ್ಳಬೇಕು. ಹೀಗಾಗಿ ಜಾಮೀನು ನೀಡಲೇಬೇಕು’ ಎಂದು ಸಿವಿ ನಾಗೇಶ್ ಕೋರ್ಟ್ ಬಳಿ ಕೋರಿದರು.

ಅತ್ತ ಪ್ರಸನ್ನ ಕುಮಾರ್ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ‘ಈಗಿನ ವರದಿಯಲ್ಲಿ ದರ್ಶನ್ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿಯೇ ಇದೆ. ಮುಂದೊಂದು ದಿನ ಸಮಸ್ಯೆ ಬರಹುದು ಎಂದಿದೆ. ಅಲ್ಲದೆ, ದರ್ಶನ್​ಗೆ ಯಾವ ರೀತಿಯ ಚಿಕಿತ್ಸೆ ನೀಡಲಾಗುತ್ತದೆ ಎಂಬ ಬಗ್ಗೆ ಉಲ್ಲೇಖ ಇಲ್ಲ’ ಎಂದು ವಾದ ಮಾಡಿದರು. ಇದನ್ನು ಹೈಕೋರ್ಟ್ ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದರು. ‘ಆರೋಗ್ಯ ಪ್ರತಿಯೊಬ್ಬ ಖೈದಿಯ ಹಕ್ಕು’ ಎಂದಿದ್ದಾರೆ.

ದರ್ಶನ್ ಅವರಿಗೆ ಕುಳಿತುಕೊಳ್ಳಲು ಹಾಗೂ ನಿಂತುಕೊಳ್ಳಲೂ ಆಗದ ಸ್ಥಿತಿ ನಿರ್ಮಾಣ ಆಗಿದೆ. ಅವರ ಆರೋಗ್ಯ ದಿನಕಳೆದಂತೆ ಹದಗೆಡುತ್ತಿದೆ ಎನ್ನಲಾಗಿದೆ. ಈಗಾಗಲೇ ಅವರ ಕಾಲು ಮರುಗಟ್ಟುವಿಕೆ ಆರಂಭ ಆಗಿದೆಯಂತೆ. ಇದು ಹೀಗೆ ಮುಂದುವರಿದರೆ ದರ್ಶನ್​ಗೆ ಅಪಾಯ ಕಟ್ಟಿಟ್ಟ ಬುಟ್ಟಿ ಎನ್ನಲಾಗಿದೆ.

ಮಧ್ಯಾಹ್ನ 2.30ಕ್ಕೆ ದರ್ಶನ್​ ಪ್ರಕರಣದಲ್ಲಿ ಆದೇಶ ಹೊರ ಬರಲಿದೆ. ದರ್ಶನ್​ಗೆ ಜಾಮೀನು ಸಿಕ್ಕರೆ ಫ್ಯಾನ್ಸ್ ಇದನ್ನು ಸಂಭ್ರಮಿಸಲಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆಯುವುದರಿಂದ ಅವರು ನೇರವಾಗಿ ಆಸ್ಪತ್ರೆಗೆ ತೆರಳುವ ಸಾಧ್ಯತೆ ಇದೆ. ಅಭಿಮಾನಿಗಳ ಸಂಭ್ರಮಾಚರಣೆಯಲ್ಲಿ ಅವರು ಭಾಗಿ ಆಗುವುದಿಲ್ಲ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments