Wednesday, April 30, 2025
24 C
Bengaluru
LIVE
ಮನೆ#Exclusive NewsTop Newsರಾಧಿಕಾ ಜೊತೆಗೂಡಿ ಹರಕೆ ತೀರಿಸಿದ ನಟ ಯಶ್‌

ರಾಧಿಕಾ ಜೊತೆಗೂಡಿ ಹರಕೆ ತೀರಿಸಿದ ನಟ ಯಶ್‌

ಮಂಗಳೂರು: ನಟ ಯಶ್‌ ಅವರು ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆಯ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ನಟಿ ರಾಧಿಕಾ, ಮಕ್ಕಳ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ವೇಳೆ ಕುಟುಂಬದ ಮಣ್ಣಿನ ಮೂರ್ತಿ ಮತ್ತು ಮಣ್ಣಿನ ಫಿಲ್ಮ್ ರೀಲ್‌ ಹರಕೆಯನ್ನು ಯಶ್‌ ತೀರಿಸಿದರು. ಈ ಭೇಟಿಯ ವೇಳೆ ಟಾಕ್ಸಿಕ್ ಚಲನಚಿತ್ರದ ನಿರ್ಮಾಪಕ ವೆಂಕಟ್‌ ಅವರು ಸಾಥ್ ನೀಡಿದರು. ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಯಶ್‌ ಅವರು ಧರ್ಮಸ್ಥಳ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments